ಉಡುಪಿ: ‘‘ನನ್ನ ಕುಟುಂಬವನ್ನು ಸರ್ವನಾಶ ಮಾಡಿದ ಕ್ರೂರಿಗೆ ಈ ಭೂಮಿ ಮೇಲೆ ಬದುಕುವ ಯಾವುದೇ ಅರ್ಹತೆ ಇಲ್ಲ. ಆತ ಮನುಷ್ಯನೇ ಅಲ್ಲ, ಮೃಗ. ನನ್ನ ಮಗಳಿಗೆ ಮಾಡಿದ ರೀತಿ ಮುಂದೆ ಆತ ಬೇರೆ ಯಾವ ಹೆಣ್ಣು ಮಕ್ಕಳಿಗೂ ಮಾಡಬಾರದು. ಆದುದರಿಂದ ತ್ವರಿತ ನ್ಯಾಯಾಲಯ ಸ್ಥಾಪಿಸಿ ಕೂಡಲೇ ಆತನಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು’’ ಎಂದು ನೂರ್ ಮುಹಮ್ಮದ್ ಒತ್ತಾಯಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಪೊಲೀಸರು ಒಳ್ಳೆಯ ರೀತಿಯಲ್ಲಿ ತನಿಖೆ ನಡೆಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಅವರ ಕಾರ್ಯದಲ್ಲಿ ನನಗೆ ತುಂಬಾ ತೃಪ್ತಿ ಇದೆ. ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
‘ನನ್ನ ಮಗಳು ಐನಾಝ್ ಕಳೆದ ಒಂದು ವರ್ಷ ಎರಡು ತಿಂಗಳಿನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು. ಹಲವು ಬಾರಿ ಹೊರ ದೇಶಕ್ಕೆ ಹೋಗಿ ಬಂದಿದ್ದಾಳೆ. ಅವಳ ಜೊತೆ ಹಿರಿಯ ಸಿಬ್ಬಂದಿ ಕೂಡ ಇರುತ್ತಾರೆ. ಹಾಗೆ ಆಕೆ ಸೀನಿಯರ್ ಕ್ರ್ಯೂ ಆಗಿದ್ದ ಪ್ರವೀಣ್ ಜೊತೆ ಎರಡು ಮೂರು ಬಾರಿ ಪ್ರಯಾಣ ಮಾಡಿದ್ದಾಳೆ. ಅದು ಬಿಟ್ಟು ಅವರಿಗೆ ಬೇರೆ ಯಾವುದೇ ಸಂಪರ್ಕ ಇರಲಿಲ್ಲ’ ಎಂದು ಅವರು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…