ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು, ‘ನಾನು ಬಹಳ ಬೇಗ ಹಿಂದಿ ಇಂಗ್ಲಿಷ್ ಕಲಿಯುತ್ತೇನೆಂಬ ವಿಶ್ವಾಸ ಇದೆ’ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು, ಅಹರ್ನಿಷಿ ದುಡಿದ ಕಾರ್ಯಕರ್ತರಿಗೆ ಧನ್ಯವಾದಗಳು. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬ ಹಂಬಲದಿಂದ ಜನರು ನನಗೆ ಮತ ಹಾಕಿದ್ದಾರೆ. ಎನ್ಡಿಎ ಸ್ಪಷ್ಟ ಬಹುಮತ ಪಡೆಯುವ ನಿರೀಕ್ಷೆ ನಮಗೆ ಇತ್ತು. ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಇತ್ತು. ಎನ್ಡಿಎ 295ರ ಆಸು ಪಾಸು ಗೆಲುವು ಪಡೆದಿದೆ. ನಿಶ್ಚಯವಾಗಿ ಎನ್ಡಿಎ ಅಧಿಕಾರಕ್ಕೆ ಬರುತ್ತೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
‘ನಿರೀಕ್ಷೆ ಮಟ್ಟಕ್ಕೆ ಮುಟ್ಟಿಲ್ಲ ನಿಜ. ಉತ್ತರ ಪ್ರದೇಶ ಪಶ್ಚಿಮ ಬಂಗಾಳ ರಾಜಸ್ಥಾನದಲ್ಲಿ ನಾವು ಊಹೆ ಮಾಡಿದ ಪ್ರಮಾಣದಲ್ಲಿ ಗೆಲುವು ಪಡೆದಿಲ್ಲ. ಕೊನೆಯ ಹಂತದಲ್ಲಿ ಇಂಡಿಯಾ ಒಕ್ಕೂಟದವರು ಒಂದು ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದರು. ಮನೆ ಮನೆಗೆ ಮಾಡಿದ ಪ್ರಚಾರ ಸಾಮಾನ್ಯ ಜನರಲ್ಲಿ ಬದಲಾವಣೆಗೆ ಕಾರಣವಾಗಿರಬಹುದು. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಎನ್ಡಿಎ ಮತ್ತೊಮ್ಮೆ ಗೆದ್ದಿದೆ’ ಎಂದು ತಿಳಿಸಿದರು.
‘ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲುವ ಭರವಸೆ ಇತ್ತು. ಸ್ವಲ್ಪ ಕಡಿಮೆ ಇದ್ದೇವೆ. ತುಂಬಾ ಕಡಿಮೆ ಏನೂ ಬಂದಿಲ್ಲ. ಮತ್ತೊಮ್ಮೆ ಎನ್ಡಿಎ ಒಕ್ಕೂಟ ವಿಶ್ವಾಸ ಪಡೆದಿದೆ. ಭಾರತಕ್ಕೆ ನರೇಂದ್ರ ಮೋದಿ ತುಂಬಾ ಕೆಲಸ ಮಾಡಿದ್ದಾರೆ. ಬಡವರ ಕಲ್ಯಾಣ ಯೋಜನೆಗಳು ಕೈ ಹಿಡಿದಿವೆ. 370 ರದ್ದು ಮಾಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಿದ್ದು ಈ ಎಲ್ಲಾ ಘಟನೆಗಳು ಕಣ್ಣಮುಂದೆ ಇದ್ದರೂ ಜನ ಒಂದು ಲಕ್ಷ ರೂಪಾಯಿ ನೀಡುವ ಇಂಡಿಯಾ ಒಕ್ಕೂಟ ಘೋಷಣೆಗೆ ಗಮನ ಸೆಳೆದಿದ್ದಾರೆ. ಇಂಡಿಯಾ ಒಕ್ಕೂಟದ ಈ ತಂತ್ರ ಕೆಲಸ ಮಾಡಿದ್ದು ಸತ್ಯ’ ಎಂದು ಹೇಳಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…