Featured

ಉಡುಪಿ:  ನಮೋ ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜರಿಂದ ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ಅವಕಾಶವಾದಿ ರಾಜಕಾರಣ  : ರಮೇಶ್ ಕಾಂಚನ್ – Vishwanews24

ಉಡುಪಿ: ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣ ನಡೆಸುತ್ತಿದ್ದಾರೆ : ರಮೇಶ್ ಕಾಂಚನ್

ಉಡುಪಿ: “ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯ‌ಲ್ಲಿ ರಾಜ್ಯಕ್ಕೆ ನಂಬರ್ ಒನ್ ಶಾಸಕನಾಗಿ ಮೂಡಿ ಬಂದರೂ ಬಿಜೆಪಿಯ ಕಾರ್ಯಕರ್ತರು ಸೋಲಿಸಿದ್ದಾರೆ. ನನಗೆ ಕಿಂಚಿತ್ತೂ ಬೇಸರವಿಲ್ಲ. ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಇವರ ಅವಕಾಶವಾದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ತಿಳಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಪಕ್ಷವು ಐದು ಭಾರೀ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಹಲವು ಬಾರಿ ಸೋತ ಹೊರತಾಗಿಯೂ ಕಾಂಗ್ರೆಸ್ ಪಕ್ಷ ಅವರ ಕೈ ಬಿಟ್ಟಿರಲಿಲ್ಲ. 2013ರಲ್ಲಿ ಗೆಲುವು ಸಾಧಿಸಿದಾಗ ಅವರನ್ನು ರಾಜ್ಯ ನಾಯಕರನ್ನಾಗಿ ಬೆಳೆಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಅವರಿಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ, ಸಚಿವರಾಗಿ, ನಂತರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಸ್ಥಾನ‌ಮಾನ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರಮೋದ್ ಮಧ್ವರಾಜ್ ಅವರ ಗೆಲುವಿಗಾಗಿ ಹಗಲಿರುಳು ದುಡಿದಕ್ಕಾಗಿ ಅವರು ಆ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಆದರೆ ಅವರು ಯಾರ ಬಳಿಯೂ ಚರ್ಚಿಸದೇ, ಯಾರ ಬಳಿಯೂ ತಿಳಿಸದೆ, ಅವರ ಗೆಲುವಿಗಾಗಿ ಶ್ರಮಿಸಿದ ನಾಯಕರ ಹಾಗೂ ಕಾರ್ಯಕರ್ತರ ಭಾವನೆಗೆ ಬೆಲಯೂ ಕೊಡದೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುತ್ತಲೇ ಬಂದಿದ್ದಾರೆ.

ಇದೀಗ ಬಿಜೆಪಿಯ ನಾಯಕರನ್ನು, ಬಿಜೆಪಿಯ ಕಾರ್ಯಕರ್ತರನ್ನು ಒಲೈಸಲು, ಬಿಜೆಪಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಇವರ ಈ ಅವಕಾಶವಾದಿ ರಾಜಕಾರಣ ಜನರಿಗೆ ಅರ್ಥವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ಪ್ರಮೋದ್ ಮಧ್ವರಾಜ್ ಅವರಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago