ಉಡುಪಿ, : ನಮ್ಮಲ್ಲಿ ಬದಲಾವಣೆಯಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆಯಾಗಲು ಸಾಧ್ಯ. ವಿಚಕ್ಷಣಾ ದಳದವರು ಬಂದು ಕಾನೂನಿನ ಇಕ್ಕಟ್ಟಿಗೆ ಸಿಲುಕಿಸಿದ ನಂತರ ಬದಲಾವಣೆಯಾಗುವ ಬದಲು , ಭ್ರಷ್ಠಾಚಾರರ ವಿರುದ್ದ ಪ್ರತಿಜ್ಞೆ ಮಾಡಿರುವುದನ್ನು ಸ್ವಯಂ ಅನುಸರಿಸಿ, ನಮ್ಮ ಮುಂದಿನ ಪೀಳಿಗೆಗೆ ಮಾದರಿಯಾಗಬೇಕೆಂದು ಕರ್ನಾಟಕ ಲೋಕಾಯುಕ್ತದ ದ.ಕ. ಮತ್ತು ಉಡುಪಿ ಜಿಲ್ಲೆ ಪೋಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಹೇಳಿದರು.
ಅವರು ಶುಕ್ರವಾರದಂದು ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಲೋಕಾಯಕ್ತರಿಂದ ನಡೆದ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೇಂದ್ರ ವಿಚಕ್ಷಣಾ ಆಯೋಗದ ವತಿಯಿಂದ ಪ್ರತಿ ವರ್ಷ ಅಕ್ಟೋಬರ್ 26 ರಿಂದ ನವೆಂಬರ್ 1 ರವರೆಗೆ ಭಷ್ಠಾಚಾರ ನಿರ್ಮೂಲನ ಜಾಗೃತಿ/ಅರಿವು ಸಪ್ತಾಹ ಆಚರಣೆ ಮಾಡಲಾಗುತ್ತಿದೆ. ಈ ಜಾಗೃತಿ ಅಭಿಯಾನದ ಮುಖ್ಯ ಉದ್ದೇಶವೇ ಪ್ರತಿ ಇಲಾಖೆಯಲ್ಲಿ ಕರ್ಯ ನಿರ್ವಹಿಸುವಂತಹ ಕಛೇರಿ ಸಿಬ್ಬಂದಿ ಮತ್ತು ಸೇವೆ ಪಡೆದುಕೊಳ್ಳುವ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹದ್ದು, ಎಲ್ಲಾ ಸಂಸ್ಥೆಗಳು, ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು, ಸ್ವಯಂ ಸೇವಕ ಸಂಸ್ಥೆಗಳು, ಸಮುದಾಯಗಳು ಒಗ್ಗಟ್ಟಾಗಿ ಪ್ರತಿಜ್ಞಾ ಬದ್ಧರಾಗಿ ಭಷ್ಠಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಬೇಕೆಂದರು.
ಸಾರಿಗೆ ಕಛೇರಿಯ ಅಧೀಕ್ಷಕರಾದ ಗೀತಾ ಸಾರಿಗೆ ವಿಭಾಗ ಕಾರ್ಯಗಳ ಬಗ್ಗೆ , ಪಮಿತಾ ಸಾರಿಗೆಯೇತರ ವಿಭಾಗದ ಕಾರ್ಯಗಳ ಬಗ್ಗೆ , ಸರಸ್ವತಿ ಡಿಲ್ ವಿಭಾಗದ ಕಾರ್ಯಗಳ ಬಗ್ಗೆ ,ಗೀತಾ ಮಾಹಿತಿ ನೀಡಿದರು.
ಕಾರ್ಮಿಕ ಅಧಿಕಾರಿ ಕುಮಾರ್ ಕಾರ್ಮಿಕ ಇಲಾಖೆ ಸೌಲಭ್ಯಗಳ ಬಗ್ಗೆ, ಸುಗುಣ ಹಿಂದುಳಿದ ವರ್ಗಗಳ ಇಲಾಖೆ ಸೌಲಭ್ಯಗಳ ಬಗ್ಗೆ ,ಅನಿತಾ ಗಣಿ ಇಲಾಖೆಯ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಜಯರಾಮ ಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಮತ್ತು ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಗಣಿ ಇಲಾಖೆಯ ಸಿಬ್ಬಂದಿಗಳು, ಚಾಲನ ತರಬೇತಿ ಶಾಲೆಯವರು, ಅಭ್ಯರ್ಥಿಗಳು, ಸಾರ್ವಜನಿಕರು, ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೋಟಾರು ವಾಹನ ನಿರೀಕ್ಷಕ ಎನ್.ವಿಶ್ವನಾಥ ನಾಯ್ಕ್ ಸ್ವಾಗತಿಸಿ, ವಂದಿಸಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…