ಉಡುಪಿ: ನಮ್ಮ ಭಾರತ ದೇಶವು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ 1947ರಿಂದ ನಿರಂತರವಾಗಿ ಅಭಿವೃದ್ಧಿಯನ್ನು ಹೊಂದುತ್ತಾ ಪ್ರಪಂಚದಲ್ಲಿ ಮೂರನೇ ಸ್ಥಾನದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ನಮ್ಮ ಭಾರತ ದೇಶ ಒಂದಾಗಿತ್ತು.
ಆದರೆ 2014ರಲ್ಲಿ ಬಿಜೆಪಿಯ ಆಡಳಿತದಲ್ಲಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ದೇಶ ಅಭಿವೃದ್ಧಿಯಲ್ಲಿ ಸಂಪೂರ್ಣ ಕುಂಟಿತಗೊಂಡು ಇಂದು ನೆರೆಯ ಸಣ್ಣ ರಾಷ್ಟ್ರಗಳಾದ ಬಾಂಗ್ಲಾ ಹಾಗೂ ಶ್ರೀಲಂಕದ ಪರಿಸ್ಥಿತಿಯತ್ತ ನಮ್ಮ ದೇಶ ದಾಪುಕಾಲ್ ಹಾಕುತ್ತಿರುವುದು ನಮ್ಮ ದೇಶದ ಜನರ ದುರಾದೃಷ್ಟ.
ಈ ಬಾರಿಯಾದರೂ ನಮ್ಮ ಭಾರತೀಯರೆಲ್ಲರೂ ಒಂದಾಗಿ ಈ ಕ್ಲಿಷ್ಟ ಪರಿಸ್ಥಿತಿಯಲ್ಲಿರುವ ನಮ್ಮ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ. ಆದುದರಿಂದ ಬಿಜೆಪಿ ಮತ್ತು ಮೋದಿ ಇದು ಎರಡನ್ನು ಬಿಟ್ಟು ಕಾಂಗ್ರೆಸ್ ಪಕ್ಷದತ್ತ ತಮ್ಮ ಮನಸ್ಸನ್ನು ಬದಲಾವಣೆಗೊಳಿಸಿ. ನಮ್ಮ ದೇಶದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬ ಸತ್ಯವನ್ನು ನಮ್ಮ ಮತದಾರರು ಅರಿತುಕೊಳ್ಳಬೇಕಾಗಿದೆ. ಅದಕ್ಕಾಗಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ನಿಷ್ಕಳಂಕ ಅಭಿವೃದ್ಧಿಯ ಹರಿಕಾರರಾದ ಎಲ್ಲಾ ಜನಸಾಮಾನ್ಯರನ್ನು ಗುರುತಿಸುವಂತಹ ನೆಚ್ಚಿನ ಕಾಂಗ್ರೆಸ್ ಪಕ್ಷದ ನಾಯಕರಾದ ಜಯಪ್ರಕಾಶ್ ಹೆಗ್ಡೆ ಇವರನ್ನು ತಾವು ಗೆಲ್ಲಿಸಬೇಕಾಗಿದೆ. ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ಅಭಿವೃದ್ಧಿಯೆಂದರೆ ಏನೆಂದೇ ತಿಳಿದಿಲ್ಲ ಸಂಘ ಪರಿವಾರ ಹಾಗೂ ಮೋದಿ ಬಿಟ್ಟರೆ ಮೂರನೇದು ಅವರಿಗೆ ಗೊತ್ತೇ ಇಲ್ಲದಂತ ಪರಿಸ್ಥಿತಿಯಲ್ಲಿ ಇವರಿದ್ದಾರೆ. ಆದ ಕಾರಣ ಈ ಬಾರಿ ನಮ್ಮ ಕ್ಷೇತ್ರದ ಮತದಾರರು ಎಚ್ಚೆತ್ತುಕೊಂಡು ನಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಂತ ಕಾಂಗ್ರೆಸ್ ಪಕ್ಷದ ನಾಯಕನನ್ನು ಗೆಲ್ಲಿಸುವಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…