Featured

ಉಡುಪಿ: ನಮ್ಮ ದೇಶದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬ ಸತ್ಯವನ್ನು ಮತದಾರರು ಅರಿತುಕೊಳ್ಳಬೇಕು : ಸುರೇಶ್ ಶೆಟ್ಟಿ ಬನ್ನಂಜೆ – Vishwanews24

ಉಡುಪಿ: ಬಿಜೆಪಿ ಮತ್ತು ಮೋದಿ ಎರಡನ್ನು ಬಿಟ್ಟು ಕಾಂಗ್ರೆಸ್ ಪಕ್ಷದತ್ತ ತಮ್ಮ ಮನಸ್ಸನ್ನು ಬದಲಾವಣೆಗೊಳಿಸಿ : ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ: ನಮ್ಮ ಭಾರತ ದೇಶವು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ 1947ರಿಂದ ನಿರಂತರವಾಗಿ ಅಭಿವೃದ್ಧಿಯನ್ನು ಹೊಂದುತ್ತಾ ಪ್ರಪಂಚದಲ್ಲಿ ಮೂರನೇ ಸ್ಥಾನದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ನಮ್ಮ ಭಾರತ ದೇಶ ಒಂದಾಗಿತ್ತು.

ಆದರೆ 2014ರಲ್ಲಿ ಬಿಜೆಪಿಯ ಆಡಳಿತದಲ್ಲಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ದೇಶ ಅಭಿವೃದ್ಧಿಯಲ್ಲಿ ಸಂಪೂರ್ಣ ಕುಂಟಿತಗೊಂಡು ಇಂದು ನೆರೆಯ ಸಣ್ಣ ರಾಷ್ಟ್ರಗಳಾದ ಬಾಂಗ್ಲಾ ಹಾಗೂ ಶ್ರೀಲಂಕದ ಪರಿಸ್ಥಿತಿಯತ್ತ ನಮ್ಮ ದೇಶ ದಾಪುಕಾಲ್ ಹಾಕುತ್ತಿರುವುದು ನಮ್ಮ ದೇಶದ ಜನರ ದುರಾದೃಷ್ಟ.

ಈ ಬಾರಿಯಾದರೂ ನಮ್ಮ ಭಾರತೀಯರೆಲ್ಲರೂ ಒಂದಾಗಿ ಈ ಕ್ಲಿಷ್ಟ ಪರಿಸ್ಥಿತಿಯಲ್ಲಿರುವ ನಮ್ಮ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ. ಆದುದರಿಂದ ಬಿಜೆಪಿ ಮತ್ತು ಮೋದಿ ಇದು ಎರಡನ್ನು ಬಿಟ್ಟು ಕಾಂಗ್ರೆಸ್ ಪಕ್ಷದತ್ತ ತಮ್ಮ ಮನಸ್ಸನ್ನು ಬದಲಾವಣೆಗೊಳಿಸಿ. ನಮ್ಮ ದೇಶದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬ ಸತ್ಯವನ್ನು ನಮ್ಮ ಮತದಾರರು ಅರಿತುಕೊಳ್ಳಬೇಕಾಗಿದೆ. ಅದಕ್ಕಾಗಿ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ನಿಷ್ಕಳಂಕ ಅಭಿವೃದ್ಧಿಯ ಹರಿಕಾರರಾದ ಎಲ್ಲಾ ಜನಸಾಮಾನ್ಯರನ್ನು ಗುರುತಿಸುವಂತಹ ನೆಚ್ಚಿನ ಕಾಂಗ್ರೆಸ್ ಪಕ್ಷದ ನಾಯಕರಾದ ಜಯಪ್ರಕಾಶ್ ಹೆಗ್ಡೆ ಇವರನ್ನು ತಾವು ಗೆಲ್ಲಿಸಬೇಕಾಗಿದೆ. ವಿರೋಧ ಪಕ್ಷದ ಅಭ್ಯರ್ಥಿಗಳಿಗೆ ಅಭಿವೃದ್ಧಿಯೆಂದರೆ ಏನೆಂದೇ ತಿಳಿದಿಲ್ಲ ಸಂಘ ಪರಿವಾರ ಹಾಗೂ ಮೋದಿ ಬಿಟ್ಟರೆ ಮೂರನೇದು ಅವರಿಗೆ ಗೊತ್ತೇ ಇಲ್ಲದಂತ ಪರಿಸ್ಥಿತಿಯಲ್ಲಿ ಇವರಿದ್ದಾರೆ. ಆದ ಕಾರಣ ಈ ಬಾರಿ ನಮ್ಮ ಕ್ಷೇತ್ರದ ಮತದಾರರು ಎಚ್ಚೆತ್ತುಕೊಂಡು ನಮ್ಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಂತ ಕಾಂಗ್ರೆಸ್ ಪಕ್ಷದ ನಾಯಕನನ್ನು ಗೆಲ್ಲಿಸುವಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago