Featured

ಉಡುಪಿ: ‘ನಮ್ಮ ನಡಿಗೆ ಪಂಚಾಯತ್ ಕಡೆಗೆ’ ಪಂಚಗ್ಯಾರಂಟಿ ಯೋಜನೆ ಮಾಹಿತಿ ಕಾರ್ಯಾಗಾರ ಆರಂಭ: ರಮೇಶ್ ಕಾಂಚನ್ – vishwanews24

ಉಡುಪಿ:ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ನಮ್ಮ ನಡಿಗೆ ಪಂಚಾಯತ್ ಕಡೆಗೆ ಕಾರ್ಯಾಗಾರ ಆರಂಭ : ರಮೇಶ್ ಕಾಂಚನ್

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಎಂಬ ಕಾರ್ಯಕ್ರಮವನ್ನು ವಾರದೊಳಗೆ ಆರಂಭಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪಂಚಾಯತ್‌ಗಳಿಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳನ್ನು ಸೇರಿಸಿ ಮಾಹಿತಿ ಕಾರ್ಯಾಗಾರ ವನ್ನು ನಡೆಸಿ ಯೋಜನೆಗಳ ಮಾಹಿತಿ ನೀಡುವ ಕಾರ್ಯ ಮಾಡಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಭೆಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಯೋಜನಾಧಿಕಾರಿ, ಈ ಯೋಜನೆಯಲ್ಲಿ ಈವರೆಗೆ ಉಡುಪಿ ತಾಲೂಕಿನ ಒಟ್ಟು 765618 ಮಂದಿಗೆ ಒಟ್ಟು 153,12,36000ರೂ. ಹಣ ಪಾವತಿಯಾಗಿದೆ. ಈ ಹಿಂದೆ ಸರಕಾರವೇ ನೇರವಾಗಿ ಹಣ ಬಿಡುಗಡೆ ಮಾಡುತ್ತಿದ್ದು, ಎಪ್ರಿಲ್‌ನಿಂದ ಇಲಾಖೆಯ ಮೂಲಕ ಹಣ ಪಾವತಿ ಮಾಡಲಾಗುತ್ತಿದೆ. ಅದರಂತೆ ಎಪ್ರಿಲ್ ಮತ್ತು ಮೇ ತಿಂಗಳಿಗೆ ಒಟ್ಟು 40,83,93,889ರೂ. ಹಣ ಬಿಡುಗಡೆಯಾಗಿದ್ದು, ಅದರಲ್ಲಿ ಒಟ್ಟು 80498 ಫಲಾನುಭವಿಗಳಿಗೆ 40,54,16,000ರೂ. ವಿತರಿಸಲಾಗಿದೆ. ಉಳಿಕೆ ಹಣವನ್ನು ಮುಂದಿನ ತಿಂಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ಗೃಹಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಮೆಸ್ಕಾಂ ಅಧಿಕಾರಿ ಗಣರಾಜ ಭಟ್, ಮೇ ತಿಂಗಳಲ್ಲಿ ಉಡುಪಿ, ಕಲ್ಯಾಣಪುರ ಹಾಗೂ ಮಣಿಪಾಲ ಉಪವಿಭಾಗದಲ್ಲಿ ಒಟ್ಟು 40693 ಮನೆಗಳಿಗೆ 3.86ಕೋಟಿ ರೂ. ಮೊತ್ತ ಉಚಿತ ವಿದ್ಯುತ್ ನೀಡಲಾಗಿದೆ ಎಂದು ತಿಳಿಸಿದರು.ಕೆಎಸ್‌ಆರ್‌ಟಿ ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 10,98,750 ಮಹಿಳೆಯರು ಹಾಗೂ 19ಸಾವಿರ ಮಕ್ಕಳು ಸೇರಿದಂತೆ ಒಟ್ಟು 11.17ಲಕ್ಷ ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಅದಕ್ಕಾಗಿ 4,73,66,593ರೂ. ವ್ಯಯಿಸಲಾ ಗಿದೆ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ 704 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 588 ಮಂದಿಗೆ ಮೇ ತಿಂಗಳವರೆಗೆ ಒಟ್ಟು 104,11000ರೂ. ಹಣ ನೀಡಲಾಗಿದೆ ಎಂದು ತಿಳಿಸಿದರು. ಯುವನಿಧಿ ಯೋಜನೆ ಬಗ್ಗೆ ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗುವುದು ಎಂದು ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago