Featured

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24

ಉಡುಪಿ: ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ ಭದ್ರತೆ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಸರ್ಕಾರದ ಮುಖ್ಯ ಸಚೇತಕರೂ ಆದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಡಿಕೆಶಿಗೆ ಅವರ ಪಕ್ಷದಲ್ಲಿ ಅಭದ್ರತೆ ಕಾಡುತ್ತಿರಬೇಕು. ಹಾಗಾಗಿ ಇನ್ನೊಬ್ಬರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಮುಖ್ಯಮಂತ್ರಿಗಳಿಗೆ ಭದ್ರತೆಯ ಸಮಸ್ಯೆಯೇ ಇಲ್ಲ ಎಂದ ಸುನಿಲ್ ಕುಮಾರ್, ಡಿಕೆಶಿ ಅವರೊಂದಿಗೆ ಸಿದ್ದರಾಮಯ್ಯ ಜೊತೆಗಿನ ಭಿನ್ನಮತ ಈಗಾಗಲೇ ಬಹಿರಂಗವಾಗಿದೆ. ಬಿಜೆಪಿ ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನೂ ಎರಡು ವರ್ಷ ಕಾಲಾವಕಾಶ ಇದೆ. ಈಗಲೇ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಪೈಪೋಟಿ ಶುರುವಾಗಿದೆ. ಡಿಕೆಶಿಗೆ ಆ ಅಭದ್ರತೆ ಕಾಡುತ್ತಿರಬಹುದು.

ಡಿ.ಕೆ ಶಿವಕುಮಾರ್ ಗೆ ಸಿದ್ದರಾಮಯ್ಯ, ಪರಮೇಶ್ವರ್ ರನ್ನು ಕಂಡಾಗ ಅಭದ್ರತೆ ಕಾಡಬಹುದು. ಸದ್ಯ ನಮ್ಮಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ. ನೂರಕ್ಕೆ ನೂರು ಪ್ರತಿಶತ ಯಾವುದೇ ಚರ್ಚೆ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

4 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago