Featured

ಉಡುಪಿ : ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು : ವೆರೋನಿಕಾ ಕರ್ನೆಲಿಯೋ – Vishwanews24

ಉಡುಪಿ : ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು : ವೆರೋನಿಕಾ ಕರ್ನೆಲಿಯೋ – Vishwanews24

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು ಇಂತಹ ಕೀಳು ಮಟ್ಟದ ಹೇಳಿಕೆಯ ಮೂಲಕ ತಮ್ಮ ಸಂಸ್ಕಾರ ಏನು ಎನ್ನುವುದನ್ನು ತೋರಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಒಂದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಇಂತಹ ಸಂಸ್ಕೃತಿ ಹೀನ ಹೇಳಿಕೆ ನೀಡಿರುವ ಅವರಿಗೆ ಅವರ ಆರೆಸ್ಸೆಸ್‌ ಶಾಖೆಯಲ್ಲಿ ಕಲಿಸಿರುವ ಸಂಸ್ಕಾರ ಇದೇನಾ ಎನ್ನುವುದು ಅವರು ತಿಳಿಸಬೇಕು. ಸದಾ ಸಂಸ್ಕೃತಿ ಆಚಾರ ವಿಚಾರ ಎಂದು ಹೇಳುವ ಬಿಜೆಪಿಗರ ನಿಜವಾದ ಸಂಸ್ಕೃತಿ ಸಂಸ್ಕಾರ ಮತ್ತು ಸಂಸ್ಕೃತಿಯೇನು ಎಂಬುದು ಅವರ ಮಾತಿನಿಂದಲೇ ತಿಳಿಯುತ್ತದೆ. ರಾಜಕೀಯದಲ್ಲಿ ಟೀಕೆಗಳು ಸರ್ವೆಸಾಮಾನ್ಯ ಆದರೆ ಅದು ಸಭ್ಯತೆಯನ್ನು ಮೀರುವುದು ಸರಿಯಲ್ಲ. ರಾಹುಲ್‌ ಗಾಂಧಿ ಒರ್ವ ಪ್ರಜ್ಞಾವಂತ ಹಾಗೂ ಜವಾಬ್ದಾರಿಯುತ ನಾಯಕನಾಗಿದ್ದು ಎಂದೂ ಕೂಡ ತನ್ನ ವಿರೋಧ ಪಕ್ಷದವರ ಕುರಿತು ಎಂದಿಗೂ ಕೂಡ ಸಭ್ಯತೆ ಸಂಸ್ಕಾರ ಮೀರಿ ಹೇಳಿಕೆ ನೀಡಿಲ್ಲ” ಎಂದರು.

ಇನ್ನು “ಇತ್ತೀಚೆಗೆ ತಮ್ಮ ಪಕ್ಷದ ಐಟಿ ವಿಭಾಗ ಮೋದಿಯವರ ಬಗ್ಗೆ ಅವಹೇಳನಕಾರಿ ಟ್ವೀಟ್‌ ಮಾಡಿದ್ದ ವೇಳೆ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅದನ್ನು ಅಳಿಸಿ ಹಾಕುವಂತೆ ಹೇಳಿರುವುದು ಕಾಂಗ್ರೆಸ್‌ ಪಕ್ಷ ಮತ್ತು ಅದರ ನಾಯಕರು ತನ್ನ ವಿರೋಧ ಪಕ್ಷಕ್ಕೆ ಯಾವ ರೀತಿಯಲ್ಲಿ ಗೌರವ ನೀಡುತ್ತಾರೆ ಎನ್ನುವುದನ್ನು ಬಿಜೆಪಿಗರು ಕಲಿಯಬೇಕಾಗಿದೆ.

ರಾಹುಲ್ ಗಾಂಧಿಯವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ ಆದರೆ ಎಂದೂ ಕೂಡ ಮೋದಿಯವರ ವಿರುದ್ದ ಯಾವುದೇ ರೀತಿಯ ಹಗುರವಾದ ಹೇಳಿಕೆ ನೀಡಿಲ್ಲ. ಆದರೆ ಬಿಜೆಪಿ ನಾಯಕರು ಬಾಲಿಶತನ ಹಾಗೂ ಜೋಕರ್ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸಂಸ್ಕೃತಿ ಜೋಕರ್ ಸಂಸ್ಕೃತಿಯತ್ತ ಸಾಗಿದೆ. ರಾಹುಲ್ ಗಾಂಧಿಯವರ ವಿರುದ್ದ ಅಸಂಸದೀಯ ಪದಗಳಿಂದ ನಿಂದಿಸಿರುವ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು. ಅಲ್ಲದೆ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

8 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

12 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

12 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

13 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

13 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

14 hours ago