ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು ಇಂತಹ ಕೀಳು ಮಟ್ಟದ ಹೇಳಿಕೆಯ ಮೂಲಕ ತಮ್ಮ ಸಂಸ್ಕಾರ ಏನು ಎನ್ನುವುದನ್ನು ತೋರಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಒಂದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಇಂತಹ ಸಂಸ್ಕೃತಿ ಹೀನ ಹೇಳಿಕೆ ನೀಡಿರುವ ಅವರಿಗೆ ಅವರ ಆರೆಸ್ಸೆಸ್ ಶಾಖೆಯಲ್ಲಿ ಕಲಿಸಿರುವ ಸಂಸ್ಕಾರ ಇದೇನಾ ಎನ್ನುವುದು ಅವರು ತಿಳಿಸಬೇಕು. ಸದಾ ಸಂಸ್ಕೃತಿ ಆಚಾರ ವಿಚಾರ ಎಂದು ಹೇಳುವ ಬಿಜೆಪಿಗರ ನಿಜವಾದ ಸಂಸ್ಕೃತಿ ಸಂಸ್ಕಾರ ಮತ್ತು ಸಂಸ್ಕೃತಿಯೇನು ಎಂಬುದು ಅವರ ಮಾತಿನಿಂದಲೇ ತಿಳಿಯುತ್ತದೆ. ರಾಜಕೀಯದಲ್ಲಿ ಟೀಕೆಗಳು ಸರ್ವೆಸಾಮಾನ್ಯ ಆದರೆ ಅದು ಸಭ್ಯತೆಯನ್ನು ಮೀರುವುದು ಸರಿಯಲ್ಲ. ರಾಹುಲ್ ಗಾಂಧಿ ಒರ್ವ ಪ್ರಜ್ಞಾವಂತ ಹಾಗೂ ಜವಾಬ್ದಾರಿಯುತ ನಾಯಕನಾಗಿದ್ದು ಎಂದೂ ಕೂಡ ತನ್ನ ವಿರೋಧ ಪಕ್ಷದವರ ಕುರಿತು ಎಂದಿಗೂ ಕೂಡ ಸಭ್ಯತೆ ಸಂಸ್ಕಾರ ಮೀರಿ ಹೇಳಿಕೆ ನೀಡಿಲ್ಲ” ಎಂದರು.
ಇನ್ನು “ಇತ್ತೀಚೆಗೆ ತಮ್ಮ ಪಕ್ಷದ ಐಟಿ ವಿಭಾಗ ಮೋದಿಯವರ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದ ವೇಳೆ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅದನ್ನು ಅಳಿಸಿ ಹಾಕುವಂತೆ ಹೇಳಿರುವುದು ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ತನ್ನ ವಿರೋಧ ಪಕ್ಷಕ್ಕೆ ಯಾವ ರೀತಿಯಲ್ಲಿ ಗೌರವ ನೀಡುತ್ತಾರೆ ಎನ್ನುವುದನ್ನು ಬಿಜೆಪಿಗರು ಕಲಿಯಬೇಕಾಗಿದೆ.
ರಾಹುಲ್ ಗಾಂಧಿಯವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ ಆದರೆ ಎಂದೂ ಕೂಡ ಮೋದಿಯವರ ವಿರುದ್ದ ಯಾವುದೇ ರೀತಿಯ ಹಗುರವಾದ ಹೇಳಿಕೆ ನೀಡಿಲ್ಲ. ಆದರೆ ಬಿಜೆಪಿ ನಾಯಕರು ಬಾಲಿಶತನ ಹಾಗೂ ಜೋಕರ್ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸಂಸ್ಕೃತಿ ಜೋಕರ್ ಸಂಸ್ಕೃತಿಯತ್ತ ಸಾಗಿದೆ. ರಾಹುಲ್ ಗಾಂಧಿಯವರ ವಿರುದ್ದ ಅಸಂಸದೀಯ ಪದಗಳಿಂದ ನಿಂದಿಸಿರುವ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು. ಅಲ್ಲದೆ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…