ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.
ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.
ಇದೇ ಬರುವ ಫೆಬ್ರವರಿಯಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿರುತ್ತಾರೆ.
ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಪ್ರಭಾ ಪುರಸ್ಕಾರದ ಪ್ರಾಯೋಜಕರು ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣಿೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೆೈ, ವಿಘ್ನೇಶ್ವರ ಅಡಿಗ, ಹಾಗೂ ಸಂಚಾಲಕರಾದ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.
ಮಾಕ್ಟೈಲ್, ಗೌಜಿ ಗಮ್ಮತ್, ಗೋಸ್ಮಾರಿ ಫಾಮಿಲಿ, ಜೀಟಿಗೆ, ಕುರೆಪಟ್, ಗಂಟ್ ಕಲ್ವೆರ್, ಮೊದಲಾದ ಜನಪ್ರಿಯ ತುಳು ಚಲನಚಿತ್ರಗಳಲ್ಲಿ ಹಾಗೂ ಐ, ಶುಗರ್ ಲೆಸ್, ಅಪರಾಧಿ ನಾನಲ್ಲ, ಕನ್ನಡ ಚಲನಚಿತ್ರದಲ್ಲೂ ಮಾತ್ರವಲ್ಲದೆ ಮೂಗಜ್ಜನ ಕೋಳಿ ಎಂಬ ಅರೆಭಾಷೆ ಚಿತ್ರದಲ್ಲೂ ಕಾಣಿಸಿಕೊಂಡಿರುತ್ತಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…