Featured

ಉಡುಪಿ : ನವ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದುದು : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ : ನವ ಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದುದು : ಸಚಿವ ಸುನಿಲ್ ಕುಮಾರ್ -Vishwanews24

ಉಡುಪಿ : ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಗೆ ಶಿಕ್ಷಕರಿಗಿದ್ದು , ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ,ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇರ್ಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ,ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ, ಉಡುಪಿ ಇವರ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತಂತ್ರ‍್ರö್ಯದ ಅಮೃತ ಮಹೋತ್ಸವದ ಈ ಸಮಯದಲ್ಲಿ ಸಹ , ಸ್ವಾತಂತ್ರö್ಯ ಪೂರ್ವದಲ್ಲಿನ ಹಲವು ಸಮಸ್ಯೆಗಳೊಂದಿಗೆ ,ಹಲವು ಹೊಸ ಸಮಸ್ಯೆಗಳೊಂದಿಗೆ ಸೃಷ್ಠಿಯಾಗಿವೆ. ಇವುಗಳನ್ನು ಪರಿಹಾರಕ್ಕೆ ಪ್ರಧಾನ ಮಂತ್ರಿಗಳ ನವ ಭಾರತ ನಿರ್ಮಾಣದ ಸಾಕಾರ ಶಾಲೆಗಳಿಂದಲೇ ಆರಂಭವಾಗಬೇಕಿದೆ, ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ಮೂಲಕ ಮಾಡುವ ಮೂಲಕ ನವ ಭಾರತ ನಿರ್ಮಾಣಕ್ಕೆ ಬದ್ದರಾಗಬೇಕು ಎಂದರು.

ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನುರೂಪಿಸಿದ್ದು, ಇದರಲ್ಲಿನ ಅಂಶಗಳ ಕುರಿತು ಶಿಕ್ಷಕರು ತಿಳಿದುಕೊಂಡು, ಅದನ್ನು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸುವುದರಿAದ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದು. ಕೋವಿಡ್ ಸಂಕಷ್ಟದಲ್ಲಿಯೂ ಸಹ ಜಿಲ್ಲೆಯ ಶಿಕ್ಷಕರು ಜಿಲ್ಲಾಡಳಿದ ಸೂಚಿಸಿರುವ ಹೆಚ್ಚುವರಿ ಕರ್ತವ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನ ಶಿಕ್ಷಕರು ಮತ್ತು ಈಗಿನ ಶಿಕ್ಷಕರು , ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿ, ಬೆಳೆಸಿ, ಉತ್ತಮ ಸೇವೆ ಸಲ್ಲಿಸಿರುವ ಕಾರಣ ಜಿಲ್ಲೆಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ ಎಂದರು.

“ ಬಿಂಬ” ವಾರ್ಷಿಕ ಸಂಚಿಕೆ ಮತ್ತು ಶಿಕ್ಷಕರ ಗುರುತಿನ ಚೀಟಿಯನ್ನು ಸಚಿವ ವಿ.ಸುನೀಲ್ ಕುಮಾರ್ ಬಿಡುಗಡೆ ಮಾಡಿದರು.

ಕಾಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ 17 ಮಂದಿ ಶಿಕ್ಷಕರು, 43 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರÀ ಹೆಗ್ಡೆ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪಸ್ಥಿತರಿದ್ದರು.

ಡಿಡಿಪಿಐ ಎನ್.ಹೆಚ್. ನಾಗೂರ್ ಸ್ವಾಗತಿಸಿದರು. ಉಡುಪಿ ಬಿಇಓ ನಾಗೇಂದ್ರಪ್ಪ ವಂದಿಸಿದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

8 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

9 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

9 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

9 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

12 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago