Featured

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ,ಉಡುಪಿಯ ಕುಲಪತಿ ಪಿ.ಬಿ ಆಚಾರ್ಯ ನಿಧನ – vishwanews24

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ,ಉಡುಪಿಯ ಕುಲಪತಿ ಪಿ.ಬಿ ಆಚಾರ್ಯ ನಿಧನ

ಉಡುಪಿ : ನಾಗಾಲ್ಯಾಂಡ್‌ನ ಮಾಜಿ ಗವರ್ನರ್‌, ಉಡುಪಿಯ ಕುಲಪತಿ ಪಿಬಿ ಆಚಾರ್ಯ ಶುಕ್ರವಾರ ನ.10ರಂದು ನಿಧನರಾಗಿದ್ದಾರೆ.

ಪಿಬಿ ಆಚಾರ್ಯ ಎಂದೇ ಪ್ರಸಿದ್ದರಾಗಿದ್ದ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಬಿಜೆಪಿಗೆ ಸೇವೆ ಸಲ್ಲಿಸಿದ ಹಿರಿಯ ನಾಯಕರಾಗಿದ್ದರು. ಮಾರ್ಗರೆಟ್ ಆಳ್ವಾ ನಂತರ ರಾಜ್ಯಪಾಲ ಹುದ್ದೆಗೆ ಆಯ್ಕೆಯಾದ ಕರಾವಳಿ ಕರ್ನಾಟಕದ ಎರಡನೇ ಮತ್ತು ಜಿಎಸ್‌ಬಿ ಸಮುದಾಯದಿಂದ ಮೊದಲಿಗರು ಆಗಿದ್ದರು.

ಬಾಲಕೃಷ್ಣ ಮತ್ತು ರಾಧಾ ಆಚಾರ್ಯ ಅವರ ಪುತ್ರರಾಗಿದ್ದ ಪಿಬಿ ಆಚಾರ್ಯ, ಅವರು ಎಂ ಜಿ ಎಂ ಕಾಲೇಜಿನ ಪ್ರಥಮ ಬ್ಯಾಚ್‌ ನ ವಿದ್ಯಾರ್ಥಿಯಾಗಿದ್ದರು (1948-50). ಕಾಡಬೆಟ್ಟುವಿನಲ್ಲಿ ಆರ್‌ಎಸ್‌ಎಸ್ ವಿದ್ಯಾರಣ್ಯ ಘಟಕದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದ ಆಚಾರ್ಯ ಅವರು ಆರ್‌ಎಸ್‌ಎಸ್ ನಿಷೇಧವಾದ ಸಂದರ್ಭ 1948 ರಲ್ಲಿ ಆರು ತಿಂಗಳ ಕಾಲ ಜೈಲುವಾಸ ಅನುಭವಿಸಿದ್ದರು.

1995 ಮತ್ತು 2001 ರ ನಡುವೆ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಪದ್ಮನಾಭ ಆಚಾರ್ಯ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ರಾಜ್ಯಪಾಲರಾಗುವ ಮೊದಲು ಅವರು ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ನಾಗಾಲ್ಯಾಂಡ್, ತ್ರಿಪುರಾ, ಅಸ್ಸಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಮಣಿಪುರ ಮತ್ತು ಅರುಣಾಚಲ ಪ್ರದೇಶದ ಪ್ರಭಾರ ರಾಜ್ಯಪಾಲರಾಗಿಯೂ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago