Featured

ಉಡುಪಿ: ನಾಟ್ಯದ 108 ಕರಣಗಳ ಮೂಲಕ 8ನೇ ವಿಶ್ವದಾಖಲೆ ಬರೆದ ಯೋಗ ಸಾಧಕಿ ತನುಶ್ರೀ – Vishwanews24

ಯೋಗ ಸಾಧಕಿ ತನುಶ್ರೀ ಪಿತ್ರೋಡಿಯ 8 ನೇ ವಿಶ್ವದಾಖಲೆ

ನಾಟ್ಯಶಾಸ್ತ್ರದ 108 ಕರಣಗಳ ಯಶಸ್ವಿ ಪ್ರದರ್ಶನ

ಉಡುಪಿ: ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದಲ್ಲಿ ವಿವರಿಸಿದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು.

ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ ಕರಣಗಳ ಮೂಲ ಎನ್ನಲಾಗುತ್ತದೆ. ಪ್ರತೀ ಕರಣವನ್ನು ಚಲನೆಯಂತೆ ಅಭ್ಯಾಸ ಮಾಡಲಾಗಿದ್ದು, ಇದು ಕೇವಲ ಭಂಗಿಯಲ್ಲ. 108 ನಾಟ್ಯಶಾಸ್ತ್ರದಲ್ಲಿ ಇದನ್ನು ಕ್ರೋಢಿಕರಿಸಲಾಗಿದೆ ಎಂದು ತನುಶ್ರೀ ಅವರ ಗುರು ಶ್ರೀರಾಮಕೃಷ್ಣ ಕೊಡಂಚ ತಿಳಿಸಿದರು.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಗೌರವ್ ಮಿತ್ತಲ್ ಅವರು ದಾಖಲೆಯ ಪ್ರಮಾಣಪತ್ರವನ್ನು ತನುಶ್ರೀ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಸೈಂಟ್ ಸಿಸಿಲಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಪಿತ್ರೋಡಿ ಅವರು 8ನೇ ವಿಶ್ವ ದಾಖಲೆಯನ್ನು ಮುಡಿಗೇರಿಸಿಕೊಂಡಿದ್ದು, ಒಂದು ಗಿನ್ನೆಸ್ ರೆಕಾರ್ಡ್, 7 ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ತಮ್ಮ ಸಾಧನೆಯನ್ನು ಮಾಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago