ಉಡುಪಿ : ಮೀನುಗಾರಿಕೆಗೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ಅಲೆಗಳ ರಭಸಕ್ಕೆ ನೀರುಪಾಲಾದ ದಾರುಣ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48), ಗಂಗೊಳ್ಳಿ ಬೇಲಿಕೆರಿ ನಿವಾಸಿ ರೋಹಿತ್ ಖಾರ್ವಿ (35), ಮಲ್ಯಾರುಬೆಟ್ಟು ನಿವಾಸಿ ಜಗದೀಶ್ ಖಾರ್ವಿ (50) ನೀರುಪಾಲಾದ ಮೀನುಗಾರರು.
ಮುಂಜಾನೆ ಸಿಪಾಯಿ ಸುರೇಶ್ ಮಾಲೀಕತ್ವದ ನಾಡದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಡಲು ಪ್ರಕ್ಷುಬ್ದಗೊಂಡ ಹಿನ್ನೆಲೆಯಲ್ಲಿ ಅಪಾಯದ ಮುನ್ಸೂಚನೆಯನ್ನರಿತ ಮೀನುಗಾರರು ದಡಕ್ಕೆ ವಾಪಾಸಾಗಲು ಪ್ರಯತ್ನಿಸುತ್ತಿದ್ದ ವೇಳೆಯೇ ನಾಡದೋಣಿ ಮಗುಚಿದೆ ಎನ್ನಲಾಗಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಆಯತಪ್ಪಿ ನೀರಿಗೆ ಬಿದ್ದಿದ್ದು, ಓರ್ವ ಮೀನುಗಾರ ಸಂತೋಷ ಎನ್ನುವವರು ಈಜಿ ಬೇರೆ ದೋಣಿ ತಲುಪಿ ಅಪಾಯದಿಂದ ಪಾರಾಗಿದ್ದಾರೆ. ನೀರುಪಾಲಾದ ಮೂವರು ಮೀನುಗಾರರಿಗಾಗಿ ಸಮುದ್ರದಲ್ಲಿ ಹುಡುಕಾಟ ಆರಂಭಿಸಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…