ಉಡುಪಿ: 2022-23 ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5472 ಕೆ.ಎಲ್. ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2472 ಕೆಎಲ್ ಮತ್ತು 3000 ಕೆಎಲ್. ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆ ಗಿಂತಲೂ ಹೆಚ್ಚುವರಿಯಾಗಿ 2500 ಕೆ.ಎಲ್. ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7972 ಕೆ.ಎಲ್. (5472 ಕೆ.ಎಲ್.+2500ಕೆ.ಎಲ್.) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೆ ಸಾಲಿನಲ್ಲಿ ರಾಜ್ಯದಕರಾವಳಿ ಮೀನುಗಾರರು ಕೇಂದ್ರ ದಿಂದ ಪಡೆದಿದ್ದಾರೆ.
ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿಯಲ್ಲಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ, ಮೀನುಗಾರಿಕೆಯನ್ನ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಶೋಭಾ ಕರಂದ್ಲಾಜೆಯವರು ಮನಿ ಮಾಡಿದ್ದರು. ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವರಾದ ಶ್ರೀ ಹರದೀಪ್ ಸಿಂಗ್ ಮುರಿಯವರು ಮನವಿಗೆ ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ. ಹರದೀಪ ಸಿಂಗ್ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದಗಳನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…