ಉಡುಪಿ: ಕಳೆದ 32 ವರ್ಷಗಳಿಂದ ನಿರಂತರವಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೂತ್ ಮಟ್ಟದಿಂದ ಜಿಲ್ಲಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದರೂ, ಯಾವುದೇ ಹಂತದ ಚುನಾವಣೆಗಳಿಗೆ ಸ್ಪರ್ಧಿಸಲು ಅವಕಾಶ ದೊರೆತಿರುವುದಿಲ್ಲ. ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಪಕ್ಷದ ಕಷ್ಟದ ಕಾಲದಲ್ಲೂ ಮತ್ತು ಎಲ್ಲಾ ಹಂತಗಳಲ್ಲೂ ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ನನಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಈಗಾಗಲೇ ಪಕ್ಷದ ವರಿಷ್ಠರಲ್ಲಿ ಆಗ್ರಹವನ್ನು ವ್ಯಕ್ತಪಡಿಸಿದ್ದೇನೆ.
ಕರಾವಳಿ ಹಿಂದುತ್ವದ ಭದ್ರಕೋಟೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಕಾರ್ಯಕರ್ತರ ಅವಿರತ ಶ್ರಮದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಐದೂ ಕ್ಷೇತ್ರಗಳನ್ನು ಭರ್ಜರಿಯಾಗಿ ಗೆಲ್ಲುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲೇ ಅದ್ವಿತೀಯ ಸಾಧನೆ ಮಾಡಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…