Featured

ಉಡುಪಿ: ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ : ಸುಕುಮಾರ್ ಶೆಟ್ಟಿ – Vishwanews24

ಉಡುಪಿ: ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ : ಸುಕುಮಾರ್ ಶೆಟ್ಟಿ

ಬೈಂದೂರಿನಲ್ಲಿ ಬಿಜೆಪಿಗೆ 14 ಸಾವಿರಕ್ಕಿಂತ ಹೆಚ್ಚು ಮತ ಸಿಗುವುದಿಲ್ಲ

ಉಡುಪಿ,: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಇದೀಗ ಎರಡೆರಡು ಬಂಡಾಯದ ಬಿಸಿಯನ್ನು ಅನುಭವಿಸುತ್ತಿದೆ. ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗದಲ್ಲಿ ಹಳೆಹುಲಿ ಕೆ.ಎಸ್.ಈಶ್ವರಪ್ಪ ಹಾಗೂ ಬೈಂದೂರಿ ನಲ್ಲಿ ಬಿ.ಎಂ.ಸುಕುಮಾರ್ ಶೆಟ್ಟಿ ಅವರು ಬಿಸಿ ತುಪ್ಪವಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕಕೆ ಸೇರಿರುವ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗ ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಇತ್ತೀಚೆಗೆ ಮತ್ತೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ತನ್ನ ರಾಜಕೀಯ ಗುರು ಬಿ.ಎಸ್.ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ.

 

ಬೆಂಗಳೂರಿನಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದ ಬಿ.ಎಂ.ಸುಕುಮಾರ್ ಶೆಟ್ಟಿ ಇದೀಗ ಮಾಧ್ಯಮಗಳಿಗೆ ಹೇಳಿಕೆ ಯೊಂದನ್ನು ನೀಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೈಂದೂರು ಕ್ಷೇತ್ರದಲ್ಲಿ ಭಾಗ ಮುನ್ನಡೆ ದೊರಕಿಸಿ ಕೊಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಗೆ ಭಾರಿ ಮುನ್ನಡೆ ನೀಡಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದಿಂದಾಗಿ ರಾಘವೇಂದ್ರ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎರಡು ಚುನಾವಣೆಯಲ್ಲಿ ಬಿಜೆಪಿಗೆ ಬೈಂದೂರಿನಲ್ಲಿ 14 ಸಾವಿರ ಲೀಡ್ ಇತ್ತು. ಆದರೆ ಕಳೆದ ಬಾರಿ ಇದು 75 ಸಾವಿರಕ್ಕೇರಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಬಾರಿ ಬೈಂದೂರಿನಲ್ಲಿ ಬಿಜೆಪಿಗೆ 14 ಸಾವಿರಕ್ಕಿಂತ ಹೆಚ್ಚು ಮತ ಸಿಗುವುದಿಲ್ಲ. ಬಿಜೆಪಿ ಪ್ರಾಮಾಣಿಕವಾಗಿ ದುಡಿ ದವರನ್ನು ಗುರುತಿಸಿಲ್ಲ. ಪ್ರಾಮಾಣಿಕರು ಪಕ್ಷ ಬಿಟ್ಟು ಹೊರಗೆ ಹೋಗುವಂತಾಗಿದೆ. ಚುನಾವಣೆ ನಡೆದು 9 ತಿಂಗಳಾದರೂ ನನ್ನನ್ನು ಯಾರು ಮಾತನಾಡಿಸಿಲ್ಲ. ಆದರೆ ಕಾಂಗ್ರೆಸ್‌ನವರು ನನ್ನನ್ನು ಆಹ್ವಾನಿಸಿದರು. ನಾನು ಕಾಂಗ್ರೆಸ್ ಸೇರ್ಪಡೆಯಾ ಗಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್ಸಿಗೆ ಅತಿ ಹೆಚ್ಚು ಮತ ಬೀಳುವಂತೆ ಮಾಡುತ್ತೇನೆ ಎಂದವರು ಭರವಸೆ ನೀಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಹೋರಾಟ ಇದೆ. ಈಶ್ವರಪ್ಪ ಬಿಜೆಪಿ ಪಕ್ಷ ಕಟ್ಟಿದ ನಾಯಕ. ಅವರಿಗೂ ಬೇಸರವಾಗಿದೆ. ಈಶ್ವರಪ್ಪ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ. ಈಶ್ವರಪ್ಪ ಹಿಂದುತ್ವದ ಮತ ಪಡೆದರೆ ರಾಘವೇಂದ್ರ ಮೂರನೇ ಸ್ಥಾನಕ್ಕೆ ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸುಕುಮಾರ್ ಶೆಟ್ಟಿ, ಈ ದಿಸೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಗಲೇ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago