ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ವಾರದ ಹಿಂದೆ ಕಣ್ಮರೆಯಾಗಿದ್ದರು. ಊರು, ಕಾಡಿನ ಸುತ್ತಮುತ್ತ ಇಡೀ ಗ್ರಾಮಕ್ಕೆ ಗ್ರಾಮ ಆತನನ್ನು ಹುಡುಕಾಟ ಮಾಡಿತ್ತು. ಪೊಲೀಸರು ಅರಣ್ಯ ಇಲಾಖೆ ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಯುವಕನ ಪತ್ತೆ ಆಗಿರಲಿಲ್ಲ. ಮನೆಯ ಸಾಕು ನಾಯಿ ಯುವಕನನ್ನ 7 ದಿನದ ಬಳಿಕ ಕರೆದುಕೊಂಡು ಬಂದಿದೆ. ಇದರಿಂದ ಇಡೀ ಗ್ರಾಮಕ್ಕೆ ಅಚ್ಚರಿ ಮತ್ತು ಸಂತಸವಾಗಿದ್ದು, 50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಮೆರವಣಿಗೆ ಮಾಡಲಾಯ್ತು.
ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ. ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಲಾಯ್ತು. ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.
ಯುವಕ ವಿವೇಕಾನಂದ ಕಣ್ಮರೆಯಾದ ನಂತರ ಜ್ಯೋತಿಷಿಗಳಲ್ಲಿ ಪ್ರಶ್ನಾ ಚಿಂತನೆ ಮಾಡಲಾಗಿತ್ತು. ದೇವಸ್ಥಾನ, ದೈವಸ್ಥಾನದ ಮೊರೆ ಹೋಗಲಾಗಿತ್ತು. ಕುಟುಂಬಸ್ಥರು ಹರಕೆಯನ್ನು ಹೊತ್ತಿದ್ದರು. ತಮ್ಮ ಜಮೀನಿನಲ್ಲಿದ್ದ ಒಂದು ವಿಶೇಷ ಕಲ್ಲಿಗೆ ಪೂಜೆ ಪುನಸ್ಕಾರವನ್ನು ಕೂಡ ಕುಟುಂಬಸ್ಥರು ನೆರವೇರಿಸಿದ್ದಾರೆ. ಕಣ್ಮರೆಯಾಗುವ ಮೊದಲು ಆ ಯುವಕ ಕಲ್ಲಿನ ಮೇಲೆ ಕುಳಿತುಕೊಳ್ಳುತ್ತಿದ್ದ ಎಂದು ಕುಟುಂಬಸ್ಥರು ಹೇಳಿದ್ದು, ಆ ಕಲ್ಲಿನಲ್ಲಿ ದೈವೀಶಕ್ತಿ ಇರಬಹುದು ಎಂದು ಪೋಷಕರು ನಂಬಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ ಕುರಿತಂತೆ ಚರ್ಚೆ ಕೂಡಾ ನಡೆಯುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…