Featured

ಉಡುಪಿ: ನಾಪತ್ತೆಯಾದ ಯುವಕ ಮನೆಯ ಸಾಕುನಾಯಿಯೊಂದಿಗೆ ಪತ್ತೆ – ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆ – Vishwanews24

ಉಡುಪಿ: ನಾಪತ್ತೆಯಾದ ಯುವಕ ಮನೆಯ ಸಾಕುನಾಯಿಯೊಂದಿಗೆ ಪತ್ತೆ – ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆ

ಉಡುಪಿ: ನಿಗೂಢವಾಗಿ ಕಣ್ಮರೆಯಾಗಿ ಅಚ್ಚರಿಯ ರೀತಿಯಲ್ಲಿ ಮನೆಗೆ ವಾಪಸ್ ಆದ ಯುವಕನನ್ನು ಇಡೀ ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.

ಉಡುಪಿ  ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ವಾರದ ಹಿಂದೆ ಕಣ್ಮರೆಯಾಗಿದ್ದರು. ಊರು, ಕಾಡಿನ ಸುತ್ತಮುತ್ತ ಇಡೀ ಗ್ರಾಮಕ್ಕೆ ಗ್ರಾಮ ಆತನನ್ನು ಹುಡುಕಾಟ ಮಾಡಿತ್ತು. ಪೊಲೀಸರು ಅರಣ್ಯ ಇಲಾಖೆ ಕುಟುಂಬಸ್ಥರು ಎಷ್ಟೇ ಹುಡುಕಾಡಿದರೂ ಯುವಕನ ಪತ್ತೆ ಆಗಿರಲಿಲ್ಲ. ಮನೆಯ ಸಾಕು ನಾಯಿ ಯುವಕನನ್ನ 7 ದಿನದ ಬಳಿಕ ಕರೆದುಕೊಂಡು ಬಂದಿದೆ. ಇದರಿಂದ ಇಡೀ ಗ್ರಾಮಕ್ಕೆ ಅಚ್ಚರಿ ಮತ್ತು ಸಂತಸವಾಗಿದ್ದು, 50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಮೆರವಣಿಗೆ ಮಾಡಲಾಯ್ತು.

ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ. ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಲಾಯ್ತು. ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.

ಯುವಕ ವಿವೇಕಾನಂದ ಕಣ್ಮರೆಯಾದ ನಂತರ ಜ್ಯೋತಿಷಿಗಳಲ್ಲಿ ಪ್ರಶ್ನಾ ಚಿಂತನೆ ಮಾಡಲಾಗಿತ್ತು. ದೇವಸ್ಥಾನ, ದೈವಸ್ಥಾನದ ಮೊರೆ ಹೋಗಲಾಗಿತ್ತು. ಕುಟುಂಬಸ್ಥರು ಹರಕೆಯನ್ನು ಹೊತ್ತಿದ್ದರು. ತಮ್ಮ ಜಮೀನಿನಲ್ಲಿದ್ದ ಒಂದು ವಿಶೇಷ ಕಲ್ಲಿಗೆ ಪೂಜೆ ಪುನಸ್ಕಾರವನ್ನು ಕೂಡ ಕುಟುಂಬಸ್ಥರು ನೆರವೇರಿಸಿದ್ದಾರೆ. ಕಣ್ಮರೆಯಾಗುವ ಮೊದಲು ಆ ಯುವಕ ಕಲ್ಲಿನ ಮೇಲೆ ಕುಳಿತುಕೊಳ್ಳುತ್ತಿದ್ದ ಎಂದು ಕುಟುಂಬಸ್ಥರು ಹೇಳಿದ್ದು, ಆ ಕಲ್ಲಿನಲ್ಲಿ ದೈವೀಶಕ್ತಿ ಇರಬಹುದು ಎಂದು ಪೋಷಕರು ನಂಬಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ ಕುರಿತಂತೆ ಚರ್ಚೆ ಕೂಡಾ ನಡೆಯುತ್ತಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago