ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಕಛೇರಿ, ಹೋಟೆಲ್, ಬ್ಯಾಂಕ್, ಕಂಪೆನಿಗಳು, ಅಂಗಡಿಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿರುವಂತೆ ಹಾಗೂ ನಾಮಫಲಕದ ಜೊತೆಗೆ ಆ ಸ್ಥಳದ ಐತಿಹ್ಯ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿಊರಿನ ಹೆಸರನ್ನು ಸಹ ನಮೂದಿಸುವುದು ಕಡ್ಡಾಯವಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು, ತಮ್ಮ ಉದ್ದಿಮೆಯ ನಾಮಫಲಕದಲ್ಲಿ ಊರಿನ ಹೆಸರಿನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಇತರೆ ಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕವನ್ನು ಶೇ.60ರಷ್ಟು ಪ್ರದರ್ಶಿಸಬೇಕು.
ಇದನ್ನೂ ಓದಿ:
ಈವರೆಗೂ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳದ/ನವೀಕರಿಸದೇ ಇರುವ ಉದ್ದಿಮೆದಾರರು, ಉದ್ದಿಮೆ ಪರವಾನಿಗೆ ಪಡೆಯಲು ನಿಯಮಾನುಸಾರ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದರೂ, ಸಹ ಕೆಲವು ವಾಣಿಜ್ಯ ಮಳಿಗೆಗಳು ನಗರಸಭೆಯ ಸೂಚನೆಗಳನ್ನು ಪಾಲಿಸದೆ ಇರುವುದು ಕಂಡು ಬಂದಿರುತ್ತದೆ.
ಫೆಬ್ರವರಿ ಮಾಹೆಯೊಳಗೆ ನಾಮಫಲಕವನ್ನು ಆಳವಡಿಸದಿದ್ದರೆ ದಂಡ ವಿಧಿಸಲಾಗುವುದು ಹಾಗೂ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…