Featured

ಉಡುಪಿ : ನಾಮ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ – vishwanews24

ಉಡುಪಿ : ನಾಮ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ

ಉಡುಪಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಅನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸದೇ ಇರುವುದು ಪರಿಶೀಲನೆ ವೇಳೆಕಂಡುಬ0ದಿದ್ದು, ನಿಯಮವನ್ನು ಪಾಲಿಸದೇ ಇರುವ ಸಂಘ, ಸಂಸ್ಥೆ ಹಾಗೂ ಘಟಕಗಳಿಗೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅನ್ವಯ ಮೊದಲನೇಯ ಅಪರಾಧಕ್ಕಾಗಿ 5000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ, ಎರಡನೇಯ ಅಪರಾಧಕ್ಕಾಗಿ ರೂ. 10000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ಹಾಗೂ ನಂತರದ ಪ್ರತಿಯೊಂದು ಅಪರಾಧಕ್ಕಾಗಿ 20000 ರೂ. ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆ ವಿಧಿಸುವುದರೊಂದಿಗೆ ಪರವಾನಿಗೆಯನ್ನು ಸಹ ರದ್ದುಗೊಳಿಸಬಹುದಾಗಿರುತ್ತದೆ.

ಆದ್ದರಿಂದ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಸಂಘ, ಸಂಸ್ಥೆ ಹಾಗೂ ಘಟಕದ ಹೆಸರು ಮತ್ತು ವಿಳಾಸವನ್ನು ಕನ್ನಡಭಾಷೆಯಲ್ಲಿ ಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವ ಮೂಲಕ ಪರಿಷ್ಕೃತ ಫಲಕವನ್ನು ಆಗಸ್ಟ್ 30 ರ ರೊಳಗಾಗಿ ಅಳವಡಿಸಬೇಕು. ನಂತರದ ದಿನಗಳಲ್ಲಿ ತಪಾಸಣೆ ಸಂದರ್ಭದಲ್ಲಿ ನಾಮಫಲಕದಲ್ಲಿ ವ್ಯತ್ಯಾಸ ಕಂಡುಬ0ದಲ್ಲಿ ಮೇಲೆ ವಿವರಿಸಿರುವ ದಂಡನೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

16 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

16 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago