Featured

ಉಡುಪಿ: ನಾರಾಯಣ ಗುರುಗಳ ಬಗೆಗಿನ ಪಠ್ಯ ಪುಸ್ತಕ ಕೈ ಬಿಡುವುದು ಬಿಜೆಪಿ ಡೋಂಗಿ ಎಂದು ತೋರಿಸುತ್ತದೆ : ದೀಪಕ್‌ ಕೋಟ್ಯಾನ್ – Vishwanews24

ದೀಪ ಆರುವ ಮುಂಚೆ ಜೋರಾಗಿ ಉರಿಯುವ ರೀತಿ ಬಿಜೆಪಿ ಪರಿಸ್ಥಿತಿ ..

ಬಿಲ್ಲವರ ಬಗ್ಗೆ ಬರೇ ಭಾಷಣ ಮಾಡಿದ ಕಾರ್ಕಳ ದ ಬಿಲ್ಲವ ಹಾಗೂ ಬಿಜೆಪಿಯ ಬಿಲ್ಲವ ಮುಖಂಡರು ಈಗ ಮಾತನಾಡಲಿ

ಉಡುಪಿ: ದೀಪ ಆರುವ ಮುಂಚೆ ಜೋರಾಗಿ ಉರಿಯುವ ರೀತಿ ಬಿಜೆಪಿ ಪರಿಸ್ಥಿತಿ ಯಾಗಿದೆ. ನಾರಾಯಣ ಗುರುಗಳ ಪಠ್ಯ ವನ್ನು ಕೈ ಬಿಟ್ಟಿರುವುದು ಬಿಜೆಪಿ ಯದ್ದು ವಿನಾಶಕಾಲೆ ವಿಪರೀತ ಬುದ್ದಿ ಎಂದು ತೋರಿಸುತ್ತದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್‌ ಕೋಟ್ಯಾನ್‌ ಅವರು ಹೇಳಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ಅವರು, ದೇಶದಲ್ಲಿ ತೀವ್ರವಾದ ಅಸ್ಪೃಶ್ಯ , ಶೋಷಣೆ ಇದ್ದ ಸಮಯದಲ್ಲಿ ಪೆರಿಯರ್ ಹಾಗೂ ನಾರಾಯಣ ಗುರುಗಳಂತವರು ಕ್ರಾಂತಿ ಮಾಡಿದ್ದರು. ಆ ಸಮಯದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ ಮಾಡುವುದು ಕಷ್ಟದ ಕೆಲಸ ವಾಗಿತ್ತು. ಶೋಷಣೆ ಗೆ ಒಳಗಾಗಿದ್ದ ಬಿಲ್ಲವ ಸಮಾಜವನ್ನು ಮುಖ್ಯವಾಗಿ ಸಿಕೊಂಡು ಅಸ್ಪೃಶ್ಯ ತೆಯಿಂದ ನೊಂದಿದ್ದ ಇತರ ಸಮುದಾಯಕ್ಕೂ ದಾರಿ ದೀಪವಾದವರು. ಆದ್ದರಿಂದ ಅವರ ಬಗೆಗಿನ ಪಠ್ಯ ಪುಸ್ತಕ ಕೈ ಬಿಡುವುದು ಬಿಜೆಪಿ ಡೋಂಗಿ ಎಂದು ತೋರಿಸುತ್ತದೆ ಎಂದರು.

ಅಂದು ನಾರಾಯಣ ಗುರುಗಳ ಟ್ಯಾಬ್ಲೋ ಧಿಕ್ಕರಿಸಿ ದವರು ಇಂದು ಪಠ್ಯ ಕೈಬಿಟ್ಟಿದ್ದಾರೆ ಎಂದ ಅವರು, ಬಿಲ್ಲವರ ಬಗ್ಗೆ ಬರೇ ಭಾಷಣ ಮಾಡಿ ಹೋಟೆಲ್ ಕೇಳಿದ ಕೆಲವು ಕಾರ್ಕಳ ದ ಬಿಲ್ಲವ ನಾಯಕರು ಹಾಗೂ ಬಿಜೆಪಿಯ ಬಿಲ್ಲವ ಮುಖಂಡರು ಈಗ ಮಾತನಾಡಲಿ ಎಂದು ಸವಾಲು ಹಾಕಿದರು.

ಶಿವಮೊಗ್ಗ ದ ವಿಮಾನ ನಿಲ್ದಾಣ ಕ್ಕೆ ಯಡಿಯೂರಪ್ಪ ಹೆಸರು ಸೂಚಿಸುವ ಇವರ ಮಂತ್ರಿ ಮಂಡಲದ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರುಗಳು ಮತ್ತು ಮಂಗಳೂರು ವಿಮಾನ ನಿಲ್ದಾಣ ಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಕೇಳಲು ಮಾತು ಬರುವುದಿಲ್ಲವೇ ಎಂದು ಕೇಳಬೆಕಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಹಿಂದುಳಿದ ವರ್ಗದವರನ್ನು ಮುಗಿಸುವ ಹಾಗೂ ಮೇಲ್ವರ್ಗದ ವರನ್ನು ಜೀವಂತ ಇಡುವ ಉದ್ದೇಶದಿಂದ ಅವರು ಈ ರೀತಿಯಲ್ಲಿ ಬಿಜೆಪಿ ವರ್ತಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

15 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

16 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

16 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

17 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

19 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

19 hours ago