Featured

ಉಡುಪಿ : ನಾರಾಯಣ ಗುರು ವೃತ್ತ ಏಕಾಏಕಿ ತೆರವು ಮಾಡಿರುವುದು ಅತ್ಯಂತ ಖಂಡನೀಯ : ರಮೇಶ್ ಕಾಂಚನ್ – vishwanews24

ಉಡುಪಿ : ನಾರಾಯಣ ಗುರು ವೃತ್ತ ಏಕಾಏಕಿ ತೆರವು ಮಾಡಿರುವುದು ಅತ್ಯಂತ ಖಂಡನೀಯ : ರಮೇಶ್ ಕಾಂಚನ್

ಉಡುಪಿ: ನಗರಸಭೆ ಯಿಂದ ಕಾನೂನುಬದ್ಧವಾಗಿ ನಿರ್ಮಾಣಗೊಂಡಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ತೆರವುಗೊಳಿಸಿ ಪಾಳುಬಿದ್ದರುವ ಜಾಗದ ಪೊದೆಗಳ ಮಧ್ಯೆ ಬಿಸಾಡಿರುವುದು ಅತ್ಯಂತ ಖಂಡನೀಯ. ಶೋಷಿತ ವರ್ಗದವರಿಗೆ ಗೌರವಯುತ ಬದುಕಿನ ದಾರಿ ತೋರಿದ ಮಾರ್ಗದರ್ಶಿ,ಮಹಾನ್ ದಾರ್ಶನಿಕರಾದ ಶ್ರೀ ನಾರಾಯಣ ಗುರುಗಳಿಗೆ ಅಗೌರವ ತೋರಿದ ತಪ್ಪಿತಸ್ಥರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಹಾಗೆಯೇ ನಾರಾಯಣ ಗುರುಗಳ ವೃತವನ್ನು ತೆರವುಗೊಳಿಸಿರುವುದರ ವಿರುದ್ಧ ಬಿಲ್ಲವ ಯುವ ವೇದಿಕೆಯವರು,ಬಿಲ್ಲವ ಸಮುದಾಯದ ಮುಂದಾಳುಗಳು, ಒಗ್ಗಟ್ಟಾಗಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿ ನಾರಾಯಣ ಗುರು ವೃತ್ತವನ್ನು ಮರು ಸ್ಥಾಪಿಸುವ ತನಕ ಸಂಘಟಿತ ಹೋರಾಟವನ್ನು ನಡೆಸಿರುವುದು ಬಹಳ ಶ್ಲಾಘನೀಯ.

2014ರಸಾಲಿನಲ್ಲಿ ಉಡುಪಿ ನಗರಸಭೆಯ ಅಂದಿನ ಅಧ್ಯಕ್ಷರಾದ ಯುವರಾಜ್ ಪುತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬನ್ನಂಜೆಯಲ್ಲಿ ನಾರಾಯಣ ಗುರು ವೃತ್ತ ನಿರ್ಮಿಸಲು ಸರ್ವಾನುಮತದಿಂದ ಅನುಮೋದನೆ ನೀಡಲಾಗಿತ್ತು.

ಹೀಗೆ ನಾರಾಯಣ ಗುರುಗಳ ವಿಚಾರದಲ್ಲಿ ಬಿಲ್ಲವ ಯುವ ವೇದಿಕೆ,ಬಿಲ್ಲವ ಸಮುದಾಯದ ಮುಂದಾಳುಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳು ಕೈ ಗೊಳ್ಳುವ ಕೆಲಸ ಕಾರ್ಯಗಳಿಗೆ ಮನಃಪೂರ್ವಕವಾಗಿ ಸಹಕರಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

Vishwa News 24

Recent Posts

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

3 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

13 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

23 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago