Featured

ಉಡುಪಿ : ನಾಳೆ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ – vishwanews24

ನಾಳೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ..

ಸಸಿಕಾಂತ್‌ ಸೆಂಥಿಲ್ ಗೆ ‘ಮಾನವ ರತ್ನ’, ನಿಸಾರ್ ಅಹ್ಮದ್ ಗೆ ‘ಸೇವಾ ರತ್ನ’, ಫಾ.ಮಾರ್ಟಿಸ್ ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ

ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ (ನ.10) ಸಂಜೆ 6ಗಂಟೆಗೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಮ್‌ನಲ್ಲಿ ನಡೆಯಲಿದೆ.

ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಶರ್ಫುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯೆನೆಪೋಯ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸಿನ್ ಮಲ್ಪೆ ಅಭಿನಂದನಾ ಭಾಷಣ ಮಾಡಲಿದ್ದಾರೆ.

2023-24ನೇ ಸಾಲಿನ ’ಮಾನವ ರತ್ನ’ ಪ್ರಶಸ್ತಿಗೆ ಸಂಸದ ಸಸಿಕಾಂತ್‌ ಸೆಂಥಿಲ್, ’ಸೇವಾ ರತ್ನ’ ಪ್ರಶಸ್ತಿಗೆ ಕಾರ್ಕಳದ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಮತ್ತು ಚೊಚ್ಚಲ ‘ಸೌಹಾರ್ದ ರತ್ನ’ ಪ್ರಶಸ್ತಿಗೆ ಉಡುಪಿಯ ಧರ್ಮಗುರು ಫಾ. ವಿಲಿಯಮ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಧಕರಾದ ಸಾಹಿತಿ ಡಾ.ಗಣನಾಥ ಎಕ್ಕಾರ್, ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ, ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದಲಿತ ನಾಯಕ ಅಣ್ಣಪ್ಪ ನಕ್ರೆ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೋಡಿ ಕುಂದಾಪುರ ಅವರನ್ನು ಸನ್ಮಾನಿಸಲಾಗುವುದು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago