ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಾಳೆ (ನ.10) ಸಂಜೆ 6ಗಂಟೆಗೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಮ್ನಲ್ಲಿ ನಡೆಯಲಿದೆ.
ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಶರ್ಫುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯೆನೆಪೋಯ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸಿನ್ ಮಲ್ಪೆ ಅಭಿನಂದನಾ ಭಾಷಣ ಮಾಡಲಿದ್ದಾರೆ.
2023-24ನೇ ಸಾಲಿನ ’ಮಾನವ ರತ್ನ’ ಪ್ರಶಸ್ತಿಗೆ ಸಂಸದ ಸಸಿಕಾಂತ್ ಸೆಂಥಿಲ್, ’ಸೇವಾ ರತ್ನ’ ಪ್ರಶಸ್ತಿಗೆ ಕಾರ್ಕಳದ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಮತ್ತು ಚೊಚ್ಚಲ ‘ಸೌಹಾರ್ದ ರತ್ನ’ ಪ್ರಶಸ್ತಿಗೆ ಉಡುಪಿಯ ಧರ್ಮಗುರು ಫಾ. ವಿಲಿಯಮ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಧಕರಾದ ಸಾಹಿತಿ ಡಾ.ಗಣನಾಥ ಎಕ್ಕಾರ್, ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ, ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದಲಿತ ನಾಯಕ ಅಣ್ಣಪ್ಪ ನಕ್ರೆ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೋಡಿ ಕುಂದಾಪುರ ಅವರನ್ನು ಸನ್ಮಾನಿಸಲಾಗುವುದು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…