ಉಡುಪಿ: ನಾವು ತುಳುನಾಡು ಪ್ರತ್ಯೇಕ ಬೇಕು ಎಂದು ಕೇಳುತ್ತಿಲ್ಲ. ತುಳು ಬಾಷೆಗೆ ಎರಡನೇ ಆಧ್ಯತೆ ನೀಡಿ ಎಂದು ಕೇಳುತ್ತಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಹೇಳಿದ್ದಾರೆ.
ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಸ್ಥಾನ ನೀಡುವಂತೆ ಕೇಳಿಕೊಂಡ ವಿಚಾರವಾಗಿ ಸಚಿವರು ಕನ್ನಡಕ್ಕೆ ದ್ರೋಹ ಮಾಡಿದ್ದಾರೆ ಎಂಬ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯದಲ್ಲಿ ಕನ್ನಡಕ್ಕೇ ಮೊದಲ ಆಧ್ಯತೆ. ಕನ್ನಡದ ಆಧ್ಯತೆ ಬಿಟ್ಟು ಬೇರೆ ಯಾವುದರ ಬಗ್ಗೆಯೂ ಆಲೋಚನೆ ಮಾಡಲು ಸಾಧ್ಯವಿಲ್ಲ. ಕನ್ನಡದ ಎಲ್ಲಾ ಚಟುವಟಿಕೆ ಹಾಗೂ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂಧ ಇಟ್ಟುಕೊಂಡಿರುವುದು ತುಳುನಾಡು. ನಾವು ತುಳುನಾಡು ಪ್ರತ್ಯೇಕ ಬೇಕು ಎಂದು ಕೇಳುತ್ತಿಲ್ಲ. ತುಳು ಬಾಷೆಗೆ ಎರಡನೇ ಆಧ್ಯತೆ ನೀಡಿ ಎಂದು ಕೇಳುತ್ತಿದ್ದೇವೆ. ಕನ್ನಡಕ್ಕೇ ಪರಮೋಚ್ಚ ಆಧ್ಯತೆ ಎಂದರು. ಹಾಗೂ ಬೇರೆ ರಾಜ್ಯಗಳಲ್ಲಿ ಅಲ್ಲಿನ ಆಡಳಿತ ಭಾಷೆಯ ಜೊತೆಗೆ ಸ್ಥಳೀಯ ಭಾಷೆಗೆ ಎರಡನೇ ಆಧ್ಯತೆ ನೀಡಿರುವ ಹಿನ್ನೆಲೆಯಲ್ಲಿ ನಾವು ತುಳು ಭಾಷೆಗೆ ರಾಜ್ಯದಲ್ಲಿ ಎರಡನೇ ಸ್ಥಾನ ಕೇಳುತ್ತಿದ್ದೇವೆ. ಈ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಸಮಿತಿಯ ರಚನೆ ಮಾಡಲಾಗಿದೆ ಅದರ ವರದಿ ನೋಡಿಕೊಂಡು ಸರಕಾರ ತೀರ್ಮಾಣ ಕೈಗೊಳ್ಳುತ್ತದೆ ಎಂದರು.
ಇದೇ ವೇಳೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಾಗೂ ಸಹಕಾರಿಗಳ ದೊಡ್ಡ ಸಮ್ಮೇಳನ ನಡಿತಾ ಇದೆ. ಸಹಕಾರಿ ಹಾಗೂ ಗೃಹ ಸಚಿವ ಅಮಿತ್ ಶಾ ವರು ಬರುತ್ತಿರುವುದರಿಂದ ಸಹಜವಾಗಿಯೇ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದ್ದು, ಚುನಾವಣೆಗೆ ವೇಗ ಸಿಕ್ಕೇ ಸಿಗುತ್ತದೆ. ಈ ಎರಡೂ ಜಿಲ್ಲೆಯಲ್ಲಿಯೂ ಎಲ್ಲಾ ಕಡೆ ಗೆಲ್ಲಬೇಕು ಎಂದು ತಯಾರಿ ನಡೆಯುತ್ತಿದೆ. ಅಭಿವೃದ್ಧಿ ಮತ್ತು ಹಿಂದುತ್ವದ ಕಾರಣಕ್ಕೆ ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿಯುತ್ತಾರೆ ಎಂಬ ಭರವಸೆ ಇದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…