Featured

ಉಡುಪಿ: ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ,  ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ :  ಶಾಸಕ ಯಶ್ ಪಾಲ್ ಸುವರ್ಣ – Vishwanews24

ಉಡುಪಿ: ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ,  ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ :  ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ನಾಸಿರ್ ಹುಸೇನ್ ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ. ನಾಸಿರ್ ಹುಸೇನ್ ಸದಸ್ಯತ್ವ ರದ್ದು ಮಾಡುವ ಕ್ರಮ ಕೈಗೊಳ್ಳಬೇಕು” ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಒತ್ತಾಯಿಸಿದ್ದಾರೆ.

ರಾಜ್ಯಸಭೆ ಚುನಾವಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ಮೂವರ ಬಂಧನದ ವಿಚಾರವಾಗಿ ಮಾತನಾಡಿದ ಅವರು”ನಾಸಿರ್ ಹುಸೇನ್ ದೇಶಕ್ಕೆ ಆಪತ್ತು ತರುವ ವ್ಯಕ್ತಿ. ರಾಜ್ಯಸಭೆ ಪ್ರವೇಶಿಸಿದ ನಂತರ ಗಂಡಾಂತರ ತರುವ ಸಾಧ್ಯತೆ ಇದೆ.ನಾಸಿರ್ ಹುಸೇನ್ ಸದಸ್ಯತ್ವ ರದ್ದು ಮಾಡುವ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಂಧಿತರಾದ ಮೂರು ಜನರ ಹಿನ್ನೆಲೆಯನ್ನು ತನಿಖೆ ಮಾಡಬೇಕು. ಮೂವರ ಹಿಂದೆ ಯಾರಿದ್ದಾರೆ ಅವರ ಮೇಲೂ ಕ್ರಮ ಆಗಬೇಕು. ಇದು ಇಡೀ ದೇಶದ ಜನ ತಲೆತಗ್ಗಿಸುವ ಘಟನೆಯಾಗಿತ್ತು. ನಾಸಿರ್ ಹುಸೇನ್ ನ ಹಿನ್ನೆಲೆಯನ್ನು ಪರಿಶೀಲಿಸಬೇಕು. ಆರೋಪಿಗಳು ಯಾರ ಸಹಕಾರದಿಂದ ವಿಧಾನಸೌಧ ಪ್ರವೇಶಿಸಿದ್ದರು ಎಂದು ತನಿಖೆಯಾಗಬೇಕು. ಈ ಘಟನೆಯಲ್ಲಿ ಮಾಧ್ಯಮದವರನ್ನು ಅವಹೇಳನ ಮಾಡಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಈಗಾಗಲೇ ನಾವು ಆಗ್ರಹ ಮಾಡಿದ್ದೇವೆ. ಬಾಂಬ್ ಬ್ಲಾಸ್ಟ್ ಗೂ ಈ ಘೋಷಣೆಗೂ ನಂಟಿರುವ ಸಂಶಯವಿದೆ. ಕೇಂದ್ರ ಸರ್ಕಾರಕ್ಕೆ, ಹಿಂದುತ್ವಕ್ಕೆ ವಿರೋಧ ವ್ಯಕ್ತಪಡಿಸುವ ಹುನ್ನಾರ ನಡೆಯುತ್ತಿದೆ. ಹಿಂದುಗಳ ಮೃದು ಧೋರಣೆಯಿಂದ ಇಂತಹ ಕೃತ್ಯಗಳು ನಡೆಯುತ್ತಿದೆ. ಈ ಘಟನೆ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆ ಹಾಸ್ಯಸ್ಪದವಾಗಿದೆ. ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆಯನ್ನ ಪುನರ್ ಪರಿಶೀಲನೆ ಮಾಡಬೇಕು ಎಂದು ಕಿಡಿಕಾರಿದ್ದಾರೆ.

ಪ್ರತಿಭಟಿಸಿದ ಉಡುಪಿ ಕಾಂಗ್ರೆಸ್ ನಾಯಕರಿಗೆ ಮುಖಭಂಗ ಆಗಿದೆ. ಬುರ್ಖಾ ಹಾಕಿ ತಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಇಂಡಿಯಾ ಅಲ್ಲ ಕಾಂಗ್ರೆಸ್ ಮುಸ್ಲಿಂ ಎಂದು ಪಕ್ಷದ ಹೆಸರು ಬದಲಿಸಿಕೊಳ್ಳಲಿ. ಮುಸ್ಲಿಂ ಲೀಗ್ ಜೊತೆ ನೀವು ಕೈಜೋಡಿಸುವುದು ಸೂಕ್ತ. ಭಾರತದ ಸಂಸ್ಕೃತಿ ಪರಂಪರೆ ಜೊತೆ ನೀವು ಉಳಿಯಲು ಅರ್ಹರಲ್ಲ. ನೀವು ಪಾಕಿಸ್ತಾನಕ್ಕೋ ಬಾಂಗ್ಲಾದೇಶಕ್ಕೋ ಹೋಗುವುದು ಸೂಕ್ತ ಎಂದು ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago