Featured

ಉಡುಪಿ : ನಿಟ್ಟೂರು ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ ; ಧಾರೆ ಎರೆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಉಡುಪಿ : ನಿಟ್ಟೂರು ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ ; ಧಾರೆ ಎರೆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ ಅಂಬುತೀರ್ಥ ಅವರ ಮಗನಾದ ಮಧುರಾಜ್ ಎ.ಡಿ ಅವರೊಂದಿಗೆ ನಗರದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ವಾದ್ಯ, ತಾಳ-ಮೇಳಗಳೊಂದಿಗೆ ನಡೆದ ಶುಭಲಗ್ನ ಸುಮುಹೂರ್ತದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶಾಸ್ತೊçÃಸ್ತçವಾಗಿ ಧಾರೆ ಎರೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ತೀರ್ಥಹಳ್ಳಿಯ ಮೂಲದ 29 ವರ್ಷ ವಯೋಮಿತಿಯ ಮಧುರಾಜ್ ಎ.ಡಿ ಅವರು, ನಿಲಯದ ನಿವಾಸಿನಿಯಾದ 21 ವರ್ಷ ಪ್ರಾಯದ ಖುಷ್ಬು ಸುಮೇರಾ ಅವರನ್ನು ಮದುವೆಯಾಗುವುದಾಗಿ ಈ ಹಿಂದೆ ಪ್ರಸ್ತಾಪಿಸಿರುತ್ತಾರೆ.

ಮಧುರಾಜ್ ಅವರು ಪದವಿ ವಿದ್ಯಾರ್ಹತೆ ಹೊಂದಿದ್ದು, ಜೀವನ ನಿರ್ವಹಣೆಗಾಗಿ ಕೃಷಿ ಮತ್ತು ಕ್ಯಾಟರಿಂಗ್ ಕಾರ್ಯಗಳಲ್ಲಿ ತೊಡಗಿಕೊಂಡು, ಆರ್ಥಿಕವಾಗಿ ಸದೃಢರಾಗಿರುವ ಮಧುರಾಜ್ ಎ.ಡಿ ಕುಟುಂಬವನ್ನು ಪೊಲೀಸ್ ಹಾಗೂ ರಾಜ್ಯ ನಿಲಯದ ಸಿಬ್ಬಂದಿಗಳು ಅವರ ಹಿನ್ನೆಲೆಯನ್ನು ಪರಿಶೀಲಿಸಿ, ಆರೋಗ್ಯ ದೃಢೀಕರಣ ಪಡೆದುಕೊಂಡು, ಹುಡುಗಿ ಒಪ್ಪಿಗೆಯೊಂದಿಗೆ ರಾಜ್ಯ ಮಹಿಳಾ ನಿಲಯದಲ್ಲಿ ಈ ಶುಭಕಾರ್ಯವನ್ನು ಅದ್ದೂರಿಯಾಗಿ ಮದುವೆಗೆ ದಾನಿಗಳು ಸಹಕಾರದಿಂದ ನಡೆಸಲಾಗಿದೆ ಎಂದರು.

ಸರಕಾರದಿಂದ ಹುಡುಗಿಯ ಹೆಸರಿನಲ್ಲಿ ಮುಂದಿನ ಜೀವನ ನಿರ್ವಹಣೆಗೆ 20000 ರೂ. ನೀಡಲಾಗಿದ್ದು, ಮದುವೆಯ ನಂತರ ವಿವಾಹ ನೋಂದಣಿ ಮಾಡಿಸಲಾಗುವುದು. ಪ್ರತೀ ಮೂರು ತಿಂಗಳಿಗೊಮ್ಮೆ ಮೂರು ವರ್ಷದವರೆಗೆ ಇಲಾಖೆಯು ವಧು-ವರರ ಮುಂದಿನ ಜೀವನದ ಮೇಲೆ ನಿಗಾ ವಹಿಸಲಿದೆ ಎಂದರು.

ಪ್ರಸ್ತುತ ಮಹಿಳಾ ನಿಲಯದಲ್ಲಿ 66 ಮತ್ತು ಮೂರು ಮಕ್ಕಳು ಸೇರಿದಂತೆ ಒಟ್ಟು 69 ಮಂದಿ ಇದ್ದು, ಮಹಿಳಾ ನಿಲಯದಲ್ಲಿ ವಾಸವಿರುವ ಹುಡುಗಿಯರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅವರ ಭವಿಷ್ಯದ ಬಗೆಗಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದರು.

ರಾಜ್ಯ ಮಹಿಳಾ ನಿಲಯವನ್ನು ತಳಿರು, ತೋರಣ, ರಂಗೋಲಿಯಿoದ ಅಲಂಕರಿಸಲಾಗಿದ್ದು, ಬಂದತAತಹ ಅತಿಥಿಗಳಿಗೆ ಇಲಾಖೆಯ ಸಿಬ್ಬಂದಿಗಳು ಆದರದಿಂದ ಬರಮಾಡಿಕೊಂಡರು. ಮದುವೆಯ ಬಂದವರು ವಧುವರರಿಗೆ ಶುಭಹಾರೈಸಿ, ಸಿಹಿಭೋಜನವನ್ನು ಸವಿದರು.

ಕಾರ್ಯಕ್ರಮದಲ್ಲಿ ಎಎಸ್‌ಪಿ ಟಿ ಸಿದ್ದಲಿಂಗಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುರುಷೋತ್ತಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ, ರಾಜ್ಯ ಮಹಿಳಾ ನಿಲಯದ ಸಿಬ್ಬಂದಿಗಳು, ನಿವಾಸಿನಿಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

16 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

19 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago