Featured

ಉಡುಪಿ : ನಿಫಾ ವೈರಸ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ನಿಫಾ ವೈರಸ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. -Vishwanews24

ಉಡುಪಿ : ನಿಫಾ ವೈರಸ್ ಬಗ್ಗೆ ಜನರು ಆತಂಕಗೊಳ್ಳದೆ ಆರೋಗ್ಯ ಇಲಾಖೆ ಸೂಚಿಸುವ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್. ಎಂ ಹೇಳಿದರು.

ಅವರು ಇಂದು ತಮ್ಮ ಕಛೇರಿಯ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಹಾಗೂ ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಂಡು ಬಂದಿದ್ದು, ಅಲ್ಲಿನ ಜನರು ನಾನಾ ಕಾರಣಗಳಿಂದ ಜಿಲ್ಲೆಗೆ ಬಂದು ಹೋಗುತ್ತಾರೆ, ಸರ್ಕಾರ ಕೇರಳ ರಾಜ್ಯದಿಂದ ಜನರು ಬರುವುದನ್ನು ಹಾಗೂ ಹೋಗುವುದನ್ನು ನಿರ್ಬಂದಿಸಿದೆ, ಆದರೂ ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಜ್ವರ, ಕೀಲುನೋವು, ದೇಹದ ಆಯಾಸ, ತಲೆನೋವು, ತಲೆ ಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನ ತಪ್ಪುವುದು, ನಿಫಾ ವೈರಾಣು ಜ್ವರದ ಲಕ್ಷಣಗಳಾಗಿವೆ ಎಂದರು.

ಸಾಮಾನ್ಯವಾಗಿ ಸೋಕಿತ ಬಾವಲಿಗಳ ನೇರ ಸಂಪರ್ಕದಿAದ ಅಥಾವ ಬಾವಲಿಗಳು ಸೇವಿಸಿ ಬಿಸಾಡಿದ ಹಣ್ಣು-ಹಂಪಲುಗಳನ್ನು ಸೇವಿಸುವುದರಿಂದ ಇತರೆ ಪ್ರಾಣಿಗಳಿಗೂ ಹರಡುವ ಸಾದ್ಯತೆ ಇದೆ ಎಂದರು.

ಸಾರ್ವಜನಿಕರಿಗೆ ನಿಫಾ ಸೋಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಸಿದರು.

ಕೇರಳದಿಂದ ಬರುವವರಿಗೆ ಕಡ್ಡಾಯವಾಗಿ 72 ಗಂಟೆಯೊಳಗಿನ ಕೋವಿಡ್ ಸೋಂಕಿನ ನೆಗೇಟಿವ್ ವರದಿಯನ್ನು ಹೊಂದಿ ಬಂದತಹ ವ್ಯಕ್ತಿಯನ್ನು ಕಡ್ಡಾಯವಾಗಿ 7 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಬೇಕು, ಅಲ್ಲದೆ ಕೋವಿಡ್ ಪರೀಕ್ಷೆಗೆ ಒಳಪಡಬೇಕು, ಕೊಲ್ಲುರು ದೇವಸ್ಥಾನ ಸೇರಿದಂತೆ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಬರುವಂತವರಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದರು.

ಜನರು ಹೇಚ್ಚು ಸೇರುವಂತಹ ಮಾರುಕಟ್ಟೆ, ಸಂತೆಗಳಲ್ಲಿ, ಸಭೆ, ಸಮಾರಂಭಗಳಲ್ಲಿಯೂ ಸಹ ಸೋಂಕು ಹೆಚ್ಚು ಹರಡುವ ಸಾಧ್ಯೆತೆ ಇರುವುದರಿಂದ ಅಲ್ಲಿಯೂ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು-ಹೆಚ್ಚು ಕೈಗೊಳ್ಳಬೇಕು ಎಂದರು.

ಹೊರ ದೇಶ, ಹೊರ ರಾಜ್ಯಗಳಿಂದ ವಿದಾಭ್ಯ್ಯಾಸಕ್ಕೆ ಬಂದು ವಿಧ್ಯಾರ್ಥಿ ನಿಲಯಗಳಲ್ಲಿ ತಂಗುವವರನ್ನು ಕಾಲ-ಕಾಲಕ್ಕೆ ಕೋವಿಡ್ ಪರೀಕ್ಷೆಗೊಳಪಡಿಸಬೇಕು ಎಂದ ಅವರು ಕೋವಿಡ್ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು, ಗ್ರಾಮಗಳಿಗೆ ಹೊರಗಿನಿಂದ ಬಂದವರ ಮಾಹಿತಿಯನ್ನು ನೆರೆ-ಹೊರೆಯವರು ಟಾಸ್ಕ್-ಪೊರ್ಸ್ ಸಮಿತಿಗೆ ನೀಡಬೇಕು ಎಂದರು.

ಪ್ರತಿ ಶಾಲಾ-ಕಾಲೇಜುಗಳಿಗೆ ಒಬ್ಬ ಕೋವಿಡ್ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಲ್ಲಿನ ಕೋವಿಡ್ ಸೋಂಕಿನ ಸ್ಥಿತಿಗತಿಗಳ ಬಗ್ಗೆ ನಿಗಾವಹಿಸುವ ಕಾರ್ಯವಾಗಬೇಕು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಮಾತನಾಡಿ ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣುಗಳನ್ನು ಸೇವಿಸಬಾರದು, ಬಾವಲಿಗಳು ಹೆಚ್ಚು ಇರುವ ಪ್ರದೇಶಗಳಿಂದ ಸಂಗ್ರಹಿಸಿದ ಸೇಂದಿ, ನೀರಾ, ತಾಳೆ ಹಣ್ಣಿನ ರಸವನ್ನು ಸೇವಿಸಬಾರದು. ಹಣ್ಣು ಮತ್ತು ಒಣ ಖರ್ಜೂರವನ್ನು ಸೇವಿಸುವ ಮೊದಲು ಸಂಪೂರ್ಣವಾಗಿ ಶುದ್ದೀಕರಿಸಿಕೊಳ್ಳಬೇಕು ಎಂದರು.

ಸೋAಕಿತ ಪ್ರಾಣಿಗಳಿಂದ ಇತರೆ ಪ್ರಾಣಿಗಳಿಗೆ ಮಲ, ಮೂತ್ರ, ಜೊಲ್ಲು, ರಕ್ತ ಹಾಗೂ ನೇರ ಸಂಪರ್ಕದಿAದ ಸೋಂಕು ಹರಡುವ ಸಾದ್ಯತೆ ಇರುತ್ತದೆ. ಪ್ರತಿಯೊಬ್ಬರೂ ಕೈ-ಗಳನ್ನು ಆಗಿಂದಾಗೆ ಶುದ್ಧೀಕರಿಸಿಕೊಳ್ಳಬೇಕು. ಬಾವಲಿಗಳು ವಾಸವಿರುವ ಬಾವಿಯ ನೀರನ್ನು ಕುದಿಸದೆ ಉಪಯೋಗಿಸಬಾರದು ಎಂದ ಅವರು ಸೋಂಕಿತರನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago