ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ.
ದುಬೈನಲ್ಲಿ ವಾಸವಿರುವ ಕೇರಳ ಮೂಲದ ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆರು ತಿಂಗಳು ಭಾರತದಲ್ಲಿ ತಿರುಗಾಡಲು ಕಾರುಗಳನ್ನು, ಸಮುದ್ರದ ಮುಖಾಂತರ ಹಡಗಿನಲ್ಲಿ ಆಮದು ಮಾಡಿಕೊಂಡಿದ್ದರು. ದುಬೈ ದೇಶಕ್ಕೆ 30 ಲಕ್ಷ ರೂ. ಹಾಗೂ ಭಾರತಕ್ಕೆ 1 ಕೋಟಿ ರೂ. ಹಣ ಕಟ್ಟಿರುವುದಾಗಿ ಪೊಲೀಸರ ಬಳಿ ಯುವಕರು ತಿಳಿಸಿದ್ದಾರೆ.
ಕಾರುಗಳ ದಾಖಲೆಗಳನ್ನ ಆರ್ಟಿಓಗೆ ಕಳುಹಿಸಿದ ಪೊಲೀಸರು, ದುಬೈ ನೋಂದಣಿ ಕಾರು ಓಡಾಟಕ್ಕೆ ಅನುಮತಿ ಇದೆಯೇ ಎಂದು ಪರಿಶೀಲನೆ ನಡೆಸಿದರು. ಕಾರು ಚಲಾಯಿಸುವ ಅನುಮತಿ ಇರುವ ಹಿನ್ನೆಲೆ ಆರ್ಟಿಓ ಅನುಮತಿ ಮೇರೆಗೆ ಕರ್ಕಶ ಶಬ್ದ ಮಾಡಿದ 3 ಕಾರುಗಳ ಮೇಲೆ 1,500 ರೂ. ಫೈನ್ ಹಾಕಿ ಕಳುಹಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…