ಉಡುಪಿ: ನಿಯಮ ಮೀರಿ ಕರ್ಕಶ ಸದ್ದು ಮಾಡಿದ ದುಬೈ ನೋಂದಣಿಯ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ.
ದುಬೈನಲ್ಲಿ ವಾಸವಿರುವ ಕೇರಳ ಮೂಲದ ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ ನಡೆಸಿದ್ದ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಆರು ತಿಂಗಳು ಭಾರತದಲ್ಲಿ ತಿರುಗಾಡಲು ಕಾರುಗಳನ್ನು, ಸಮುದ್ರದ ಮುಖಾಂತರ ಹಡಗಿನಲ್ಲಿ ಆಮದು ಮಾಡಿಕೊಂಡಿದ್ದರು. ದುಬೈ ದೇಶಕ್ಕೆ 30 ಲಕ್ಷ ರೂ. ಹಾಗೂ ಭಾರತಕ್ಕೆ 1 ಕೋಟಿ ರೂ. ಹಣ ಕಟ್ಟಿರುವುದಾಗಿ ಪೊಲೀಸರ ಬಳಿ ಯುವಕರು ತಿಳಿಸಿದ್ದಾರೆ.
ಕಾರುಗಳ ದಾಖಲೆಗಳನ್ನ ಆರ್ಟಿಓಗೆ ಕಳುಹಿಸಿದ ಪೊಲೀಸರು, ದುಬೈ ನೋಂದಣಿ ಕಾರು ಓಡಾಟಕ್ಕೆ ಅನುಮತಿ ಇದೆಯೇ ಎಂದು ಪರಿಶೀಲನೆ ನಡೆಸಿದರು. ಕಾರು ಚಲಾಯಿಸುವ ಅನುಮತಿ ಇರುವ ಹಿನ್ನೆಲೆ ಆರ್ಟಿಓ ಅನುಮತಿ ಮೇರೆಗೆ ಕರ್ಕಶ ಶಬ್ದ ಮಾಡಿದ 3 ಕಾರುಗಳ ಮೇಲೆ 1,500 ರೂ. ಫೈನ್ ಹಾಕಿ ಕಳುಹಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…