Featured

ಉಡುಪಿ :  ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24

ಉಡುಪಿ :  ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24

ಉಡುಪಿ: ನಿಸರ್ಗದ ಮಡಿಲಲ್ಲಿ ಸಸಿಗಳನ್ನು ನೆಟ್ಟ ಪುಟಾಣಿಗಳು. ಬಳಿಕ ಹಚ್ಚ ಹಸುರಿನ ಹೊದಿಕೆಯಲ್ಲಿ ಕುಳಿತು ಹಕ್ಕಿಗಳ ಕಲರವದ ನಡುವೆ ಹಿರಿಯ ಪರಿಸರತಜ್ಞರ ಮಾತು.. ಹೀಗೆ ವಿಶಿಷ್ಟವಾಗಿ ಉಡುಪಿ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಭಾನುವಾರ ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್, ಚೈಲ್ಡ್ ಲೈನ್ ೧೦೯೮ ಉಡುಪಿ, ಇಂಟರಾಕ್ಟ್ ಕ್ಲಬ್ ಮತ್ತು ಶ್ರೀ ಕೃಷ್ಣ ಬಾಲನಿಕೇತನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಪರಿಸರತಜ್ಞ ಮತ್ತು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎನ್.ಎ. ಮಧ್ಯಸ್ಥ ಅವರು ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಸರ್ಗದಲ್ಲಿ ಎಲ್ಲಾ ಜೀವಿಗಳಿಗೂ ನಿಕಟ ಸಂಬಂಧವಿದೆ. ನಿಸರ್ಗವನ್ನು ಕಾಪಾಡಿದರೆ ಇಲ್ಲಿಯೇ ನಾವು ಸ್ವರ್ಗವನ್ನು ಸೃಷ್ಟಿಸಬಹುದು.

ಕಾಡಿನಲ್ಲಿ ಹುಲಿ ಸತ್ತಿದ್ದರೆ ಊರಿನ ಬಾವಿಯಲ್ಲಿ ನೀರು ಕಡಿಮೆಯಾಗುತ್ತದೆ. ಇದು ನೂರಕ್ಕೆ ನೂರು ಸತ್ಯವಾದ ಮಾತು ಎಂದು ವೈಜ್ಞಾನಿಕವಾದ ಕಾರಣಗಳನ್ನು ಹೇಳಿದರು. ಕಪ್ಪೆಗಳ ಸಂತತಿ ನಶಿಸುತ್ತಿರುವುದರಿಂದ ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹೆಚ್ಚುತ್ತಿವೆ.

ದೈನಂದಿನ ಜೀವನದಲ್ಲಿ ನಾವು ಸ್ಥಳೀಯ ಆಹಾರಗಳನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು. ಹಿರಿಯರು ಅತಿ ಹೆಚ್ಚು ವರ್ಷಗಳ ಕಾಲ ಆರೋಗ್ಯವಂತರಾಗಿ ಬದುಕಲು ಅವರು ಸೇವಿಸುವ ಆಹಾರ ಕಾರಣ ಮತ್ತು ಮತ್ತು ಅವರು ನಿಸರ್ಗದೊಂದಿಗೆ ನಿಕಟವಾದ ಸಂಬಂಧವನ್ನು ಇಟ್ಟುಕೊಂಡಿದ್ದರು ಎಂದು ಪ್ರೊ. ಎನ್.ಎ. ಮಧ್ಯಸ್ಥ ಹೇಳಿದರು.

ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್ ಸದಸ್ಯ ಗಣೇಶ್ ಪ್ರಸಾದ್ ಜಿ. ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಕೃತಿ ದೇವರ ಸೃಷ್ಟಿ. ಇದನ್ನು ಉಳಿಸಲು ನಾವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಸಸಿರು ಪದರವನ್ನು ಹೆಚ್ಚಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶ್ರೀ ಕೃಷ್ಣ ಬಾಲನಿಕೇತನ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಭಟ್, ಕೆ. ಸುಬ್ರಹ್ಮಣ್ಯ ಕಾರಂತ್, ಇಂಜಿನಿಯರ್ ರಾಜೇಂದ್ರ ಮಯ್ಯ, ಚೈಲ್ಡ್ ಲೈನ್ ೧೦೯೮ ಉಡುಪಿ ಸಂಯೋಜಕಿ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು. ಚೈಲ್ಡ್ ಲೈನ್ ೧೦೯೮ ಉಡುಪಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್ ವಂದಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago