Featured

ಉಡುಪಿ :  ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24

ಉಡುಪಿ :  ನಿಸರ್ಗದಲ್ಲೇ ನಡೆಯಿತು ವಿಶ್ವ ಪರಿಸರ ದಿನಾಚರಣೆ -Vishwanews24

ಉಡುಪಿ: ನಿಸರ್ಗದ ಮಡಿಲಲ್ಲಿ ಸಸಿಗಳನ್ನು ನೆಟ್ಟ ಪುಟಾಣಿಗಳು. ಬಳಿಕ ಹಚ್ಚ ಹಸುರಿನ ಹೊದಿಕೆಯಲ್ಲಿ ಕುಳಿತು ಹಕ್ಕಿಗಳ ಕಲರವದ ನಡುವೆ ಹಿರಿಯ ಪರಿಸರತಜ್ಞರ ಮಾತು.. ಹೀಗೆ ವಿಶಿಷ್ಟವಾಗಿ ಉಡುಪಿ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಭಾನುವಾರ ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್, ಚೈಲ್ಡ್ ಲೈನ್ ೧೦೯೮ ಉಡುಪಿ, ಇಂಟರಾಕ್ಟ್ ಕ್ಲಬ್ ಮತ್ತು ಶ್ರೀ ಕೃಷ್ಣ ಬಾಲನಿಕೇತನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಪರಿಸರತಜ್ಞ ಮತ್ತು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎನ್.ಎ. ಮಧ್ಯಸ್ಥ ಅವರು ಶ್ರೀ ಕೃಷ್ಣ ಬಾಲನಿಕೇತನದ ವಠಾರದಲ್ಲಿ ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಸರ್ಗದಲ್ಲಿ ಎಲ್ಲಾ ಜೀವಿಗಳಿಗೂ ನಿಕಟ ಸಂಬಂಧವಿದೆ. ನಿಸರ್ಗವನ್ನು ಕಾಪಾಡಿದರೆ ಇಲ್ಲಿಯೇ ನಾವು ಸ್ವರ್ಗವನ್ನು ಸೃಷ್ಟಿಸಬಹುದು.

ಕಾಡಿನಲ್ಲಿ ಹುಲಿ ಸತ್ತಿದ್ದರೆ ಊರಿನ ಬಾವಿಯಲ್ಲಿ ನೀರು ಕಡಿಮೆಯಾಗುತ್ತದೆ. ಇದು ನೂರಕ್ಕೆ ನೂರು ಸತ್ಯವಾದ ಮಾತು ಎಂದು ವೈಜ್ಞಾನಿಕವಾದ ಕಾರಣಗಳನ್ನು ಹೇಳಿದರು. ಕಪ್ಪೆಗಳ ಸಂತತಿ ನಶಿಸುತ್ತಿರುವುದರಿಂದ ಡೆಂಗ್ಯೂ, ಚಿಕುನ್ ಗುನ್ಯಾದಂತಹ ರೋಗಗಳು ಹೆಚ್ಚುತ್ತಿವೆ.

ದೈನಂದಿನ ಜೀವನದಲ್ಲಿ ನಾವು ಸ್ಥಳೀಯ ಆಹಾರಗಳನ್ನು ಸೇವಿಸಿದರೆ ರೋಗಗಳಿಂದ ದೂರವಿರಬಹುದು. ಹಿರಿಯರು ಅತಿ ಹೆಚ್ಚು ವರ್ಷಗಳ ಕಾಲ ಆರೋಗ್ಯವಂತರಾಗಿ ಬದುಕಲು ಅವರು ಸೇವಿಸುವ ಆಹಾರ ಕಾರಣ ಮತ್ತು ಮತ್ತು ಅವರು ನಿಸರ್ಗದೊಂದಿಗೆ ನಿಕಟವಾದ ಸಂಬಂಧವನ್ನು ಇಟ್ಟುಕೊಂಡಿದ್ದರು ಎಂದು ಪ್ರೊ. ಎನ್.ಎ. ಮಧ್ಯಸ್ಥ ಹೇಳಿದರು.

ಆರ್ಗನೈಸೇಷನ್ ಫಾರ್ ರೂರಲ್ ಡೆವಲಪ್ಮೆಂಟ್ ಆಂಡ್ ರಿಸರ್ಚ್ ಸದಸ್ಯ ಗಣೇಶ್ ಪ್ರಸಾದ್ ಜಿ. ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಕೃತಿ ದೇವರ ಸೃಷ್ಟಿ. ಇದನ್ನು ಉಳಿಸಲು ನಾವು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು. ಸಸಿರು ಪದರವನ್ನು ಹೆಚ್ಚಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶ್ರೀ ಕೃಷ್ಣ ಬಾಲನಿಕೇತನ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಭಟ್, ಕೆ. ಸುಬ್ರಹ್ಮಣ್ಯ ಕಾರಂತ್, ಇಂಜಿನಿಯರ್ ರಾಜೇಂದ್ರ ಮಯ್ಯ, ಚೈಲ್ಡ್ ಲೈನ್ ೧೦೯೮ ಉಡುಪಿ ಸಂಯೋಜಕಿ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು. ಚೈಲ್ಡ್ ಲೈನ್ ೧೦೯೮ ಉಡುಪಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪಡಿ ಸಂಸ್ಥೆಯ ಉಡುಪಿ ಜಿಲ್ಲಾ ಸಂಯೋಜಕ ವಿವೇಕ್ ವಂದಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago