ಉಡುಪಿ : ಪ್ರತಿಯೊಬ್ಬರು ತಾವು ಮಾಡುವ ಸೇವೆಯಲ್ಲಿ ಸಾರ್ಥಕತೆ ಪಡೆದುಕೊಳ್ಳಬೇಕಾದರೆ, ಮಾಡುವ ಸೇವೆಯಲ್ಲಿ ನಿಸ್ವಾರ್ಥ ಮನೋಭಾವ ಹೊಂದಿರಬೇಕು ಎಂದು ಉಡುಪಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆoಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಹೇಳಿದರು.
ಅವರು ಇಂದು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ನಡೆದ ಘಟಕಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಪೊಲೀಸ್, ಜಿಲ್ಲಾಡಳಿತ ಹಾಗೂ ಸರ್ಕಾರದ ಇತರ ಇಲಾಖೆಗಳಲ್ಲಿ, ಕಾನೂನು ಸುವ್ಯವಸ್ಥೆ, ಪ್ರಕೃತಿ ವಿಕೋಪ ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿ ಸೇವೆ ಸಲ್ಲಿಸುವ ಪ್ರತಿಯೊಬ್ಬ ಗೃಹ ರಕ್ಷಕರಲ್ಲಿಯೂ ಸ್ವಯಂ ಸೇವಾ ಹಾಗೂ ನಿಸ್ವಾರ್ಥ ಮನೋಭಾವಗಳು ಜಾಗೃತವಾಗಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕುಂದಾಪುರ, ಜಿಲ್ಲಾ ಉಪ ಕಮಾಂಡೆAಟ್ ರಮೇಶ್, ಕಚೇರಿ ಅಧೀಕ್ಷಕಿ ಕವಿತಾ ಕೆ.ಸಿ, ಅಧಿಕಾರಿಗಳಾದ ಪ್ರಭಾಕರ ಸುವರ್ಣ ಕಾರ್ಕಳ, ಸ್ಟೀವನ್ ಪ್ರಕಾಶ್ ಬ್ರಹ್ಮಾವರ, ಕೆ. ಭಾಸ್ಕರ್ ಕುಂದಾಪುರ, ಕುಮಾರ ಉಡುಪಿ, ನವೀನ್ ಕುಮಾರ ಪಡುಬಿದ್ರಿ, ರಾಘವೇಂದ್ರ ಬೈಂದೂರು, ಶೇಖರ ಮಣಿಪಾಲ ಹಾಗೂ ಶ್ಯಾಮಲಾ ಎ ಉಪಸ್ಥಿತರಿದ್ದರು.
ಗೃಹ ರಕ್ಷಕ ದಳದ ಸೇವೆಯಲ್ಲಿ ಚಿನ್ನದ ಪದಕ ಪಡೆದುಕೊಂಡ ಡಾ. ಕೆ. ಪ್ರಶಾಂತ್ ಶೆಟ್ಟಿ ಹಾಗೂ ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ ರಾವ್ ಅವರನ್ನು ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…