ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ಜಿಲ್ಲಾ ಅದ್ಯಕ್ಷರಾದ ವೀಣಾ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಗುರುವಾರ ಗೋವಿಗಾಗಿ ಮೇವು ಅಭಿಯಾನದಡಿ ಅನಾಥ ಗೋವುಗಳ ಸಂರಕ್ಷಣೆ ಮಾಡುತ್ತಿರುವ ನೀಲಾವರ ಗೋಶಾಲೆಗೆ 2 ಲೋಡ್ ಹಸಿಹುಲ್ಲನ್ನು ಕಟಾವುಮಾಡಿ ಪೇಜಾವರ ವಿಶ್ವಪ್ರಸನ್ನ ಶ್ರೀಪಾದರಿಗೆ ಹಸ್ತಾಂತರಿಸಲಾಯಿತು.
ಮಹಿಳಾಮೋರ್ಚಾ ಜಿಲ್ಲಾ ಅದ್ಯಕ್ಷೆ ವೀಣಾ ಶೆಟ್ಟಿ ಮಾತನಾಡಿ ಉಡುಪಿ ಜಿಲ್ಲೆಯ 6 ಮಂಡಲದ ಮಹಿಳಾಮೋರ್ಚಾ ಗಳಿಗೆ ಅಭಿಯಾನದಲ್ಲಿ ಕೈಜೋಡಿಸಲು ಸೂಚಿಸಲಾಗಿದೆ ಹಾಗೂ ಜಿಲ್ಲೆಯ ಎಲ್ಲಾ ಸ್ತ್ರೀ ಶಕ್ತಿ,ಸ್ವಸಹಾಯ ಸಂಘಗಳು ಅಬಿಯಾನದಲ್ಲಿ ಪಾಲ್ಗೋಳ್ಳುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪೇಜಾವರ ಶ್ರೀಪಾದರ ಆಶೀರ್ವಾದೊಂದಿಗೆ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದು ,ಮುಂದಿನ ದಿನಗಳಲ್ಲಿ ಬಿಜೆಪಿಯ ಎಲ್ಲಾ ಮೋರ್ಚಾ ಗಳಿಗೆ ಪ್ರತೀ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ವಾರಕ್ಕೊಮ್ಮೆ ಮೇವನ್ನು ನೀಡಲು ಸೂಚಿಸಲಾಗಿದೆ ಹಾಗೂ ರಾಜ್ಯ ಬಿಜೆಪಿ ಅದ್ಯಕ್ಷರ ಗಮನಕ್ಕೆ ಅಭಿಯಾನದ ಕುರಿತು ಗಮನ ತರಲಾಗಿದೆ ಎಂದರು ಕೆಲ ದಿನಗಳ ಹಿಂದೆ ಬಿಲ್ಲಾಡಿ ಪ್ರಥ್ವೀರಾಜ್ ಶೆಟ್ಟಿ ಹಾಗೂ ಕೆಲ ಯುವಕರಿಂದ ಆರಂಭಗೊಂಡ ಅಭಿಯಾನ ರಾಜ್ಯ ವ್ತಾಪಿ ಹರಡಲಿ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…