ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ಜಿಲ್ಲಾ ಅದ್ಯಕ್ಷರಾದ ವೀಣಾ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಗುರುವಾರ ಗೋವಿಗಾಗಿ ಮೇವು ಅಭಿಯಾನದಡಿ ಅನಾಥ ಗೋವುಗಳ ಸಂರಕ್ಷಣೆ ಮಾಡುತ್ತಿರುವ ನೀಲಾವರ ಗೋಶಾಲೆಗೆ 2 ಲೋಡ್ ಹಸಿಹುಲ್ಲನ್ನು ಕಟಾವುಮಾಡಿ ಪೇಜಾವರ ವಿಶ್ವಪ್ರಸನ್ನ ಶ್ರೀಪಾದರಿಗೆ ಹಸ್ತಾಂತರಿಸಲಾಯಿತು.
ಮಹಿಳಾಮೋರ್ಚಾ ಜಿಲ್ಲಾ ಅದ್ಯಕ್ಷೆ ವೀಣಾ ಶೆಟ್ಟಿ ಮಾತನಾಡಿ ಉಡುಪಿ ಜಿಲ್ಲೆಯ 6 ಮಂಡಲದ ಮಹಿಳಾಮೋರ್ಚಾ ಗಳಿಗೆ ಅಭಿಯಾನದಲ್ಲಿ ಕೈಜೋಡಿಸಲು ಸೂಚಿಸಲಾಗಿದೆ ಹಾಗೂ ಜಿಲ್ಲೆಯ ಎಲ್ಲಾ ಸ್ತ್ರೀ ಶಕ್ತಿ,ಸ್ವಸಹಾಯ ಸಂಘಗಳು ಅಬಿಯಾನದಲ್ಲಿ ಪಾಲ್ಗೋಳ್ಳುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪೇಜಾವರ ಶ್ರೀಪಾದರ ಆಶೀರ್ವಾದೊಂದಿಗೆ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದು ,ಮುಂದಿನ ದಿನಗಳಲ್ಲಿ ಬಿಜೆಪಿಯ ಎಲ್ಲಾ ಮೋರ್ಚಾ ಗಳಿಗೆ ಪ್ರತೀ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ವಾರಕ್ಕೊಮ್ಮೆ ಮೇವನ್ನು ನೀಡಲು ಸೂಚಿಸಲಾಗಿದೆ ಹಾಗೂ ರಾಜ್ಯ ಬಿಜೆಪಿ ಅದ್ಯಕ್ಷರ ಗಮನಕ್ಕೆ ಅಭಿಯಾನದ ಕುರಿತು ಗಮನ ತರಲಾಗಿದೆ ಎಂದರು ಕೆಲ ದಿನಗಳ ಹಿಂದೆ ಬಿಲ್ಲಾಡಿ ಪ್ರಥ್ವೀರಾಜ್ ಶೆಟ್ಟಿ ಹಾಗೂ ಕೆಲ ಯುವಕರಿಂದ ಆರಂಭಗೊಂಡ ಅಭಿಯಾನ ರಾಜ್ಯ ವ್ತಾಪಿ ಹರಡಲಿ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…