Featured

ಉಡುಪಿ : ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ ; ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ : ಮುತಾಲಿಕ್‌ – Vishwanews24

ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ..

ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ..

ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು..

ಉಡುಪಿ: ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ‌ ಗಡಿಭಾಗದಲ್ಲೇ ಕುಳಿತು ಮುತಾಲಿಕ್‌ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.

ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\

ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

2 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

12 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

12 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

12 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago