Featured

ಉಡುಪಿ : ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ ; ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ : ಮುತಾಲಿಕ್‌ – Vishwanews24

ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ..

ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ..

ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು..

ಉಡುಪಿ: ಪ್ರವೀಣ್‌ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ‌ ಗಡಿಭಾಗದಲ್ಲೇ ಕುಳಿತು ಮುತಾಲಿಕ್‌ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.

ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\

ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

13 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

29 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

36 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

46 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

54 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

1 hour ago