ಉಡುಪಿ: ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರವೇಶ ಗಡಿಭಾಗದಲ್ಲೇ ಕುಳಿತು ಮುತಾಲಿಕ್ ಪ್ರವೇಶ ನಿರ್ಬಂಧವನ್ನು ವಿರೋಧಿಸಿದ್ದಾರೆ.
ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ಮಾಡದಂತೆ ಸೂಚನೆ ನೀಡಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಹೊರಟಿದ್ದ ಅವರನ್ನು ಉಡುಪಿ-ಮಂಗಳೂರು ಗಡಿಭಾಗದ ಹೆಜಮಾಡಿಯಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ನೀವು ಮುತಾಲಿಕ್ನನ್ನು ಬ್ಯಾನ್ ಮಾಡುತ್ತಿಲ್ಲ. ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ. ಹಿಂದೂ ವಿರೋಧಿ ಕಾಂಗ್ರೆಸ್ ಬ್ಯಾನ್ ಮಾಡಿದ್ದರೆ ಒಪ್ಪಿಕೊಳ್ಳಬಹುದಿತ್ತು. ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ. ನಾನು ಯಾವುದೇ ಸಮಾವೇಶ ಸಭೆಗೆ ಹೋಗುತ್ತಿಲ್ಲ. ಸಾಂತ್ವನ ಹೇಳಲು ಹೋಗುತ್ತಿದ್ದೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.\
ಇದಕ್ಕೂ ಮೊದಲು ಉಡುಪಿಯಲ್ಲಿ ಮಾತನಾಡಿದ ಮುತಾಲಿಕ್, ಬಿಜೆಪಿಯ ನಾಯಕರು ಮೂರು ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು. ಈ ಸೂಕ್ಷ್ಮ ಕಾಲದಲ್ಲಿ ಯಾವುದೇ ಕ್ರಿಯೆ-ಪ್ರತಿಕ್ರಿಯೆ ವಿಧಾನ ಇರಬಾರದು. ಎಲ್ಲ ಸಮುದಾಯದ ಮುಖಂಡರು ಒಟ್ಟಾಗಿ ಕುಳಿತು ಶಾಂತಿ ಮಾತುಕತೆ ನಡೆಸಬೇಕು ಎಂದರು.
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…