ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಸಾರ್ವಜನಿಕ ಸೇವೆಗೆ ಆಸ್ಪತ್ರೆಯನ್ನು ಒದಗಿಸದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ಖಂಡಿಸಿದೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹ್ಮದ್, ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಎಲ್ಲ ಸುಸಜ್ಜಿತ ಸೌಲಭ್ಯಗಳನ್ನು ಕಲ್ಪಿಸಿ, 2026ರ ಸೆಪ್ಟೆಂಬರ್ 30ರೊಳಗೆ ಹೊಸ ಕಟ್ಟಡದಲ್ಲಿ ಆಸ್ಪತ್ರೆಯ ಸೇವೆ ಆರಂಭಿಸಬೇಕು ಎಂದು ಆಗ್ರಹಿಸಿದರು.
ಸೆಪ್ಟೆಂಬರ್ 30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅಕ್ಟೋಬರ್ 1ರಿಂದ ಆಸ್ಪತ್ರೆಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು. ಪ್ರತಿದಿನವೂ ವಿಭಿನ್ನ ರೀತಿಯ ಹೋರಾಟ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಎಚ್ಚರಿಸಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಉಡುಪಿ ಶಾಸಕರು ಹಾಗೂ ಅಧಿಕಾರಿಗಳು ಜಿಲ್ಲಾಸ್ಪತ್ರೆ ಆರಂಭಿಸುವ ವಿಚಾರದಲ್ಲಿ ಸೂಕ್ತ ಗಮನ ಹರಿಸುತ್ತಿಲ್ಲ. ಇನ್ನಾದರೂ ಈ ಬಗ್ಗೆ ಕಾರ್ಯೋನ್ಮುಖರಾಗಿ, ಶೀಘ್ರ ಆಸ್ಪತ್ರೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…