ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಗ್ಯ ಸಚಿವರಿಗೆ ಆಗ್ರಹಿಸಿದರು.
ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಡಿಸೆಂಬರ್ 2021 ರಲ್ಲಿ ಪ್ರಾರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಮೂಲ ಅಂದಾಜಿನಲ್ಲಿನ ಅಂಶಗಳಲ್ಲಿ ಕೆಲವೊಂದು ಕಾಮಗಾರಿಗಳ ಅಗತ್ಯ ಬದಲಾವಣೆ ಹಾಗೂ ಹೆಚ್ಚುವರಿ ಅಂಶಗಳನ್ನು ಕೈಗೊಂಡಿರುವ ಕಾರಣ ನಿರ್ಮಾಣ ಕಾಮಗಾರಿ ವಿಳಂಬವಾಗಿರುತ್ತದೆ.
ಕಾಮಗಾರಿಯ ಆಡಳಿತಾತ್ಮಕ ಅನುಮೋದಿತ ಮೊತ್ತವು ರೂ. 115 ಕೋಟಿ ಮತ್ತು ಟೆಂಡರ್ ಮೊತ್ತವು 110.24 ಕೋಟಿಯಾಗಿದ್ದು, ಈ ಮೊತ್ತದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಜಿ.ಎಸ್.ಟಿ ಮೊತ್ತ ಸುಮಾರು ರೂ. 20.42ಕೋಟಿ, ಮತ್ತು ಟೆಂಡರ್ ಕರಾರಿನಂತೆ ದರ ಏರಿಕೆ (ಪ್ರೈಸ್ ಎಕ್ಸಲೇಶನ್) ಮೊತ್ತ ಸುಮಾರು ರೂ. 18.44 ಕೋಟಿ ಇವುಗಳನ್ನು ಮೂಲ ಅಂದಾಜಿನಲ್ಲಿ ಅಳವಡಿಸಿಕೊಂಡಿಲ್ಲ.
ಆಸ್ಪತ್ರೆಯು ಸಂಪೂರ್ಣ ಉಪಯೋಗಕ್ಕೆ ಬರಲು ಅವಶ್ಯವಿರುವ ಇತರೆ ಕಾಮಗಾರಿಗಳಿಗಾಗಿ ಸುಮಾರು ರೂ 9.50 ಕೋಟಿ ಒಟ್ಟಾರೆಯಾಗಿ ರೂ.48.36ಕೋಟಿ ಹೆಚ್ಚುವರಿ ಮೊತ್ತದ ಅವಶ್ಯಕತೆ ಇರುವುದರಿಂದ ಸದರಿ ಹೆಚ್ಚುವರಿ ಅಂಶಗಳನ್ನು ಪರಿಗಣಿಸಿ ಅಂದಾಜನ್ನು ಪರಿಷ್ಕರಿಸಿ ಸರ್ಕಾರದಿಂದ ಅನುಮೋದನೆ ಕೋರಿದ ಕಡತವು ಹಲವು ಸಮಯಗಳಿಂದ ಮಂಜೂರಾತಿಗೆ ಬಾಕಿ ಉಳಿದಿದೆ.
ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ಹುದ್ದೆ ಮಂಜೂರಾತಿಯೂ ಆಗಬೇಕಾಗಿದ್ದು, ಈ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಇಲಾಖೆಯ ಮೂಲಕ ಸಲ್ಲಿಸಲಾಗಿದೆ.
ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಕೀಯ ಸಲಕರಣೆಗಳ ಬೇಡಿಕೆಯನ್ನು ಈಗಾಗಲೇ ಇಲಾಖೆಗೆ ಸಲ್ಲಿಸಿದ್ದು ಸಲಕರಣೆಗಳ ಖರೀದಿಗಾಗಿ ಹೆಚ್ಚುವರಿ ರೂ. 30 ಕೋಟಿ ಅನುದಾನದ ಪ್ರಸ್ತಾವನೆಯು ಮಂಜೂರಾತಿಗೆ ಬಾಕಿಯಿದೆ.
ಕಳೆದ ಹಲವು ದಿನಗಳಿಂದ ಆರೋಗ್ಯ ಇಲಾಖೆಯ ಸರ್ವರ್ ಸಮಸ್ಯೆಯಿಂದ ಆಯುಷ್ಮಾನ್ ಯೋಜನೆಯ ಸೌಲಭ್ಯದಿಂದ ರೋಗಿಗಳು ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ವಹಿಸುವಂತೆ ಆಗ್ರಹಿಸಿದರು.
ಉಡುಪಿ ಶಾಸಕರ ಮನವಿಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಯ ಪ್ರಸ್ತಾವಿತ ಬೇಡಿಕೆಯ ಮೊತ್ತವನ್ನು ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಮಂಜೂರು ಮಾಡಲು ಆದ್ಯತೆ ನೀಡಿ, ಅಗತ್ಯ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿಗಳ ಮಂಜೂರು ಹಾಗೂ ಆಯುಷ್ಮಾನ್ ಸೇವೆ ಸರ್ವರ್ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…