Featured

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಗ್ಯ ಸಚಿವರಿಗೆ ಆಗ್ರಹಿಸಿದರು.

ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಡಿಸೆಂಬರ್ 2021 ರಲ್ಲಿ ಪ್ರಾರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಮೂಲ ಅಂದಾಜಿನಲ್ಲಿನ ಅಂಶಗಳಲ್ಲಿ ಕೆಲವೊಂದು ಕಾಮಗಾರಿಗಳ ಅಗತ್ಯ ಬದಲಾವಣೆ ಹಾಗೂ ಹೆಚ್ಚುವರಿ ಅಂಶಗಳನ್ನು ಕೈಗೊಂಡಿರುವ ಕಾರಣ ನಿರ್ಮಾಣ ಕಾಮಗಾರಿ ವಿಳಂಬವಾಗಿರುತ್ತದೆ.

ಕಾಮಗಾರಿಯ ಆಡಳಿತಾತ್ಮಕ ಅನುಮೋದಿತ ಮೊತ್ತವು ರೂ. 115 ಕೋಟಿ ಮತ್ತು ಟೆಂಡರ್ ಮೊತ್ತವು 110.24 ಕೋಟಿಯಾಗಿದ್ದು, ಈ ಮೊತ್ತದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಜಿ.ಎಸ್.ಟಿ ಮೊತ್ತ ಸುಮಾರು ರೂ. 20.42ಕೋಟಿ, ಮತ್ತು ಟೆಂಡರ್ ಕರಾರಿನಂತೆ ದರ ಏರಿಕೆ (ಪ್ರೈಸ್ ಎಕ್ಸಲೇಶನ್) ಮೊತ್ತ ಸುಮಾರು ರೂ. 18.44 ಕೋಟಿ ಇವುಗಳನ್ನು ಮೂಲ ಅಂದಾಜಿನಲ್ಲಿ ಅಳವಡಿಸಿಕೊಂಡಿಲ್ಲ.

ಆಸ್ಪತ್ರೆಯು ಸಂಪೂರ್ಣ ಉಪಯೋಗಕ್ಕೆ ಬರಲು ಅವಶ್ಯವಿರುವ ಇತರೆ ಕಾಮಗಾರಿಗಳಿಗಾಗಿ ಸುಮಾರು ರೂ 9.50 ಕೋಟಿ ಒಟ್ಟಾರೆಯಾಗಿ ರೂ.48.36ಕೋಟಿ ಹೆಚ್ಚುವರಿ ಮೊತ್ತದ ಅವಶ್ಯಕತೆ ಇರುವುದರಿಂದ ಸದರಿ ಹೆಚ್ಚುವರಿ ಅಂಶಗಳನ್ನು ಪರಿಗಣಿಸಿ ಅಂದಾಜನ್ನು ಪರಿಷ್ಕರಿಸಿ ಸರ್ಕಾರದಿಂದ ಅನುಮೋದನೆ ಕೋರಿದ ಕಡತವು ಹಲವು ಸಮಯಗಳಿಂದ ಮಂಜೂರಾತಿಗೆ ಬಾಕಿ ಉಳಿದಿದೆ.

ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ಹುದ್ದೆ ಮಂಜೂರಾತಿಯೂ ಆಗಬೇಕಾಗಿದ್ದು, ಈ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಇಲಾಖೆಯ ಮೂಲಕ ಸಲ್ಲಿಸಲಾಗಿದೆ.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಕೀಯ ಸಲಕರಣೆಗಳ ಬೇಡಿಕೆಯನ್ನು ಈಗಾಗಲೇ ಇಲಾಖೆಗೆ ಸಲ್ಲಿಸಿದ್ದು ಸಲಕರಣೆಗಳ ಖರೀದಿಗಾಗಿ ಹೆಚ್ಚುವರಿ ರೂ. 30 ಕೋಟಿ ಅನುದಾನದ ಪ್ರಸ್ತಾವನೆಯು ಮಂಜೂರಾತಿಗೆ ಬಾಕಿಯಿದೆ.

ಕಳೆದ ಹಲವು ದಿನಗಳಿಂದ ಆರೋಗ್ಯ ಇಲಾಖೆಯ ಸರ್ವರ್ ಸಮಸ್ಯೆಯಿಂದ ಆಯುಷ್ಮಾನ್ ಯೋಜನೆಯ ಸೌಲಭ್ಯದಿಂದ ರೋಗಿಗಳು ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ವಹಿಸುವಂತೆ ಆಗ್ರಹಿಸಿದರು.

ಉಡುಪಿ ಶಾಸಕರ ಮನವಿಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಯ ಪ್ರಸ್ತಾವಿತ ಬೇಡಿಕೆಯ ಮೊತ್ತವನ್ನು ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಮಂಜೂರು ಮಾಡಲು ಆದ್ಯತೆ ನೀಡಿ, ಅಗತ್ಯ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿಗಳ ಮಂಜೂರು ಹಾಗೂ ಆಯುಷ್ಮಾನ್ ಸೇವೆ ಸರ್ವರ್ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

12 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

13 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

14 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

14 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

15 hours ago