Featured

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ಅಧಿವೇಶನದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಬಾಕಿ ಅನುದಾನ ತಕ್ಷಣ ಬಿಡುಗಡೆ ಮಾಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಗ್ಯ ಸಚಿವರಿಗೆ ಆಗ್ರಹಿಸಿದರು.

ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಡಿಸೆಂಬರ್ 2021 ರಲ್ಲಿ ಪ್ರಾರಂಭಿಸಲಾಗಿದ್ದು, ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಮೂಲ ಅಂದಾಜಿನಲ್ಲಿನ ಅಂಶಗಳಲ್ಲಿ ಕೆಲವೊಂದು ಕಾಮಗಾರಿಗಳ ಅಗತ್ಯ ಬದಲಾವಣೆ ಹಾಗೂ ಹೆಚ್ಚುವರಿ ಅಂಶಗಳನ್ನು ಕೈಗೊಂಡಿರುವ ಕಾರಣ ನಿರ್ಮಾಣ ಕಾಮಗಾರಿ ವಿಳಂಬವಾಗಿರುತ್ತದೆ.

ಕಾಮಗಾರಿಯ ಆಡಳಿತಾತ್ಮಕ ಅನುಮೋದಿತ ಮೊತ್ತವು ರೂ. 115 ಕೋಟಿ ಮತ್ತು ಟೆಂಡರ್ ಮೊತ್ತವು 110.24 ಕೋಟಿಯಾಗಿದ್ದು, ಈ ಮೊತ್ತದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಜಿ.ಎಸ್.ಟಿ ಮೊತ್ತ ಸುಮಾರು ರೂ. 20.42ಕೋಟಿ, ಮತ್ತು ಟೆಂಡರ್ ಕರಾರಿನಂತೆ ದರ ಏರಿಕೆ (ಪ್ರೈಸ್ ಎಕ್ಸಲೇಶನ್) ಮೊತ್ತ ಸುಮಾರು ರೂ. 18.44 ಕೋಟಿ ಇವುಗಳನ್ನು ಮೂಲ ಅಂದಾಜಿನಲ್ಲಿ ಅಳವಡಿಸಿಕೊಂಡಿಲ್ಲ.

ಆಸ್ಪತ್ರೆಯು ಸಂಪೂರ್ಣ ಉಪಯೋಗಕ್ಕೆ ಬರಲು ಅವಶ್ಯವಿರುವ ಇತರೆ ಕಾಮಗಾರಿಗಳಿಗಾಗಿ ಸುಮಾರು ರೂ 9.50 ಕೋಟಿ ಒಟ್ಟಾರೆಯಾಗಿ ರೂ.48.36ಕೋಟಿ ಹೆಚ್ಚುವರಿ ಮೊತ್ತದ ಅವಶ್ಯಕತೆ ಇರುವುದರಿಂದ ಸದರಿ ಹೆಚ್ಚುವರಿ ಅಂಶಗಳನ್ನು ಪರಿಗಣಿಸಿ ಅಂದಾಜನ್ನು ಪರಿಷ್ಕರಿಸಿ ಸರ್ಕಾರದಿಂದ ಅನುಮೋದನೆ ಕೋರಿದ ಕಡತವು ಹಲವು ಸಮಯಗಳಿಂದ ಮಂಜೂರಾತಿಗೆ ಬಾಕಿ ಉಳಿದಿದೆ.

ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ಹುದ್ದೆ ಮಂಜೂರಾತಿಯೂ ಆಗಬೇಕಾಗಿದ್ದು, ಈ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಇಲಾಖೆಯ ಮೂಲಕ ಸಲ್ಲಿಸಲಾಗಿದೆ.

ನೂತನ ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಕೀಯ ಸಲಕರಣೆಗಳ ಬೇಡಿಕೆಯನ್ನು ಈಗಾಗಲೇ ಇಲಾಖೆಗೆ ಸಲ್ಲಿಸಿದ್ದು ಸಲಕರಣೆಗಳ ಖರೀದಿಗಾಗಿ ಹೆಚ್ಚುವರಿ ರೂ. 30 ಕೋಟಿ ಅನುದಾನದ ಪ್ರಸ್ತಾವನೆಯು ಮಂಜೂರಾತಿಗೆ ಬಾಕಿಯಿದೆ.

ಕಳೆದ ಹಲವು ದಿನಗಳಿಂದ ಆರೋಗ್ಯ ಇಲಾಖೆಯ ಸರ್ವರ್ ಸಮಸ್ಯೆಯಿಂದ ಆಯುಷ್ಮಾನ್ ಯೋಜನೆಯ ಸೌಲಭ್ಯದಿಂದ ರೋಗಿಗಳು ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ವಹಿಸುವಂತೆ ಆಗ್ರಹಿಸಿದರು.

ಉಡುಪಿ ಶಾಸಕರ ಮನವಿಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಯ ಪ್ರಸ್ತಾವಿತ ಬೇಡಿಕೆಯ ಮೊತ್ತವನ್ನು ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ಮಂಜೂರು ಮಾಡಲು ಆದ್ಯತೆ ನೀಡಿ, ಅಗತ್ಯ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿಗಳ ಮಂಜೂರು ಹಾಗೂ ಆಯುಷ್ಮಾನ್ ಸೇವೆ ಸರ್ವರ್ ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

44 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago