ಉಡುಪಿ : ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಕೋಟ ಹಾಗೂ ಸುನಿಲ್ ಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ -Vishwanews24

Featured, ಉಡುಪಿ

ಉಡುಪಿ : ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಕೋಟ ಹಾಗೂ ಸುನಿಲ್ ಕುಮಾರ್ ಅವರಿಗೆ ಜಿಲ್ಲಾ ಬಿಜೆಪಿ ಅಭಿನಂದನೆ -Vishwanews24

ಉಡುಪಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ಮೂರನೇ ಬಾರಿ ಸಚಿವರಾಗಿ ಆಯ್ಕೆಗೊಂಡು ಪ್ರಮಾಣವಚನ ಸ್ವೀಕರಿಸಿರುವ ಜಿಲ್ಲೆಯ ಸರಳ ಸಜ್ಜನಿಕೆಯ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ನೂತನ ಸಚಿವರಾಗಿ ಅಯ್ಕೆಗೊಂಡು ಪ್ರಮಾಣವಚನ ಸ್ವೀಕರಿಸಿರುವ ಸಂಘಟನಾ ಚತುರ, ಯುವ ನಾಯಕ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಾರಿ ಕರಾವಳಿ ಉಡುಪಿ ಜಿಲ್ಲೆಗೆ ಅವಳಿ ಸಚಿವರನ್ನು ನೀಡಿದ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿ, ಗೃಹ ಸಚಿವರಾದ ಸನ್ಮಾನ್ಯ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡ, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಪರವಾಗಿ ವಿಶೇಷ ಅಭಿನಂದನೆಗಳು ಎಂದು ಕುಯಿಲಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ