ಉಡುಪಿ : ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಶಾಸಕ ಕೆ. ರಘುಪತಿ ಭಟ್ ಪರಿಹಾರ ವಿತರಣೆ ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿ ಸುಧಾಮ ಪೂಜಾರಿ ಎಂಬುವವರು ಇತ್ತೀಚೆಗೆ ಸುರಿದ ಭಾರಿ ಮಳೆಯ ನೆರೆಗೆ ಕೊಚ್ಚಿಹೋಗಿ ಮೃತಪಟ್ಟಿರುತ್ತಾರೆ.
ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸು ಮಾಡಿರುವಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿರುತ್ತದೆ.
ಮೃತರ ಮನೆಗೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ರವರು ಮೃತ ಸುಧಾಮ ಪೂಜಾರಿ ಅವರ ಕುಟುಂಬದವರಿಗೆ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.
ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಕಲ್ಯಾಣಪುರ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…