ಉಡುಪಿ: ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು, ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು : ಕಲ್ಲಡ್ಕ ಪ್ರಭಾಕರ ಭಟ್ -Vishwanews24

ಉಡುಪಿ: ಮಾಜಿ ಪ್ರಧಾನಿ ನೆಹರೂ ಮತ್ತು ಅವರ ಬೆಂಬಲಿಗರದ್ದು ಹೇಡಿಗಳ ತಂಡ. ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು. ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು. ಬ್ರಿಟಿಷರು ಇನ್ನೈದು ವರ್ಷ ಭಾರತದಲ್ಲಿ ಇದ್ದಿದ್ದರೆ ಭಾರತದ ಸ್ಥಿತಿ ಹೀಗಾಗದೆ ಸ್ಥಿರವಾಗಿರುತ್ತಿತ್ತು ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಉಡುಪಿಯ ಕಟಪಾಡಿಯಲ್ಲಿ ಪೌರತ್ವ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, 72 ವರ್ಷದಲ್ಲಿ ಭಾರತ ದೇಶ ಭೂಮಿಯನ್ನೂ ಹಿಂದೂಗಳನ್ನು ಕಳೆದುಕೊಳ್ಳುತ್ತಿದೆ. ಅದ್ಭುತ ಹಿಂದೂ ಸಮಾಜ ಪಾತಾಳಕ್ಕೆ ಕುಸಿಯುತ್ತಿದೆ ಎಂದರು.

ಅಂಬೇಡ್ಕರ್ ಒಬ್ಬರು ರಾಷ್ಟ್ರೀಯ ನಾಯಕ. ಅವರನ್ನು ಒಂದು ಜಾತಿಗೆ ಸೀಮಿತ ಮಾಡಿದ್ದು ನಮ್ಮ ದುರ್ದೈವ. ಅಂಬೇಡ್ಕರ್ ಹೇಳಿದಂತೆ ನಾವು ಅವತ್ತೇ ಮಾಡಬೇಕಿತ್ತು. ಭಾರತದ ಮುಸಲ್ಮಾನರು ಪಾಕಿಸ್ತಾನಕ್ಕೆ ಹೋಗಲಿ ಎಂದಿದ್ದ ಅಂಬೇಡ್ಕರ್ ಅವರ ಮಾತಿನಂತೆ ನಾವು ಮಾಡಬೇಕಿತ್ತು. ಅವರ ಸಲಹೆಯನ್ನು ಯಾರೂ ನಡೆಸಿಕೊಡಲಿಲ್ಲ. ಪಾಕ್‍ನ ಹಿಂದೂಗಳು ಭಾರತಕ್ಕೆ ಬರಲಿ ಎಂದು ಅವತ್ತೇ ಸಲಹೆ ಕೊಟ್ಟಿದ್ದರು ಎಂದು ಹೇಳಿದರು.

ಹಿಂದೂಗಳು ದೇವರನ್ನು ಪ್ರತಿದಿನ ಆರಾಧಿಸುತ್ತಾರೆ. ಸರ್ವೇಜನ ಸುಖಿನೋ ಭವಂತು ಅಂದ್ರೆ ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಸಂಸ್ಕೃತಿ ಭಾರತದ್ದು. ನಮ್ಮವರಿಗೆ ಮಾತ್ರ ಒಳ್ಳೆಯದಾಗಲಿ ಎಂಬ ಸಂಸ್ಕೃತಿ ನಮ್ಮದಲ್ಲ. ಶುಕ್ರವಾರ ಇರುವ ಅಲ್ಲಾ ಶನಿವಾರ ಎಲ್ಲಿ ಹೋಗ್ತಾನೆ? ಭಾನುವಾರ ಬೆಳಗ್ಗೆ ಬರುವ ಏಸು ಉಳಿದ ದಿನ ಎಲ್ಲಿ ಇರುತ್ತಾನೆ ಎಂದು ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸುವ ಮಾತನಾಡಿದರು.

 

ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಿದ್ದರಾಮಯ್ಯ ಅವರದ್ದು ಷಂಡ ಸರ್ಕಾರ. ಸೊರಕೆ-ಮಧ್ವರಾಜ್ ಬೆರಕೆಯವರು. ಹಗಲು ಮಾತ್ರವಾ? ರಾತ್ರಿಯೂ ಮುಸಲ್ಮಾನರ ಜೊತೆಗಿರ್ತಾರಾ ಎಂದು ಪ್ರಶ್ನಿಸುವ ಮೂಲಕ ಚರ್ಚಾಸ್ಪದ ಹೇಳಿಕೆ ಕೊಟ್ಟರು. ಅಲ್ಲದೆ ಕಾಂಗ್ರೆಸಿಗರಿಗೆ ಇಂಜೆಕ್ಷನ್‍ನಲ್ಲಿ ಬೇರೆ ಜೀನ್ಸ್ ತುಂಬಿದೆ. ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದ್ದು, ಅದಕ್ಕೆ ಈಗ ತಿದ್ದುಪಡಿ ತರಲಾಗುತ್ತಿದೆ. ವೋಟ್ ಹೊರಟು ಹೋಗುತ್ತದೆ ಎಂಬ ಕಾರಣಕ್ಕೆ ಪ್ರಗತಿಪರ, ಮುಸಲ್ಮಾನರ ಜೊತೆ ಕಾಂಗ್ರೆಸ್ ಸೇರಿಕೊಂಡಿದೆ ಎಂದು ದೂರಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

10 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

10 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

13 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

13 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago