ಉಡುಪಿ : ನೇಜಾರು ತೃಪ್ತಿ ಲೇಔಟ್ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ರಚಿಸಲಾದ ಐದು ಪೊಲೀಸ್ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.
ಈಗಾಗಲೇ ಹಂತಕ ಹೋಗಿರುವ ಮಾರ್ಗದಲ್ಲಿರುವ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆತ ಕೊಲೆಗೈದು ನೇಜಾರಿನಿಂದ ಸಂತೆಕಟ್ಟೆಗೆ, ಸಂತೆಕಟ್ಟೆಯಿಂದ ಉಡುಪಿಗೆ, ಉಡುಪಿಯಿಂದ ಉದ್ಯಾವರದವರೆಗೆ ಹೋಗಿರುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಆತ ರಿಕ್ಷಾ ಮತ್ತು ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿ ಯಿಂದ ಕಂಡುಬಂದಿದೆ.
ಹಣಕಾಸು ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹಂತಕ ಸುಪಾರಿ ಕಿಲ್ಲರ್ ಎಂಬ ಅನುಮಾನ ವ್ಯಕ್ತವಾಗಿದೆ. ಆ ದಿಕ್ಕಿನಲ್ಲಿ ಪೊಲೀಸ್ ತಂಡ ತನಿಖೆ ಮುಂದುವರೆಸಿದೆ. ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…