Featured

ಉಡುಪಿ: ನೇಜಾರು ಕಗ್ಗೊಲೆ ಪ್ರಕರಣ ; ಅ.24ಕ್ಕೆ ವಿಚಾರಣೆ ಮುಂದೂಡಿಕೆ – vishwanews24

ಉಡುಪಿ: ನೇಜಾರು ಕಗ್ಗೊಲೆ ಪ್ರಕರಣ – ಅ.24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ನೀಡಿದೆ.

ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿ ಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆ ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ ಗುರುರಾಜ್ ಜಿ.ಎಸ್. ಹಾಜರಿದ್ದರು.

ಈ ಸಂದರ್ಭ ಆರೋಪಿಯು ‘ನನ್ನನ್ನು ಕ್ವಾರಂಟೈನ್ ಜೈಲಿನಲ್ಲಿ ಇರಿಸಲಾಗಿದೆ ಮತ್ತು ನಾನು ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ’ ಎಂದು ನ್ಯಾಯಾಧೀಶರ ಮುಂದೆ ಹೇಳಿದನು. ಆದುದರಿಂದ ನನ್ನನ್ನು ಮುಖ್ಯ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆತ ನ್ಯಾಯಾಧೀಶರಲ್ಲಿ ಮನವಿ ಮಾಡಿದನು.

ಆರೋಪಿ ಅಹವಾಲು ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಜೈಲು ಅಧೀಕ್ಷಕರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರಾಗುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಸೂಚಿಸಿದರು. ಅದರಂತೆ ಹಾಜರಾದ ಜೈಲು ಅಧೀಕ್ಷರರು, ಮುಖ್ಯ ಜೈಲಿನಲ್ಲಿ ಆರೋಪಿಗೆ ಬೆದರಿಕೆ ಇರುವುದರಿಂದ ಸುರಕ್ಷತೆ ದೃಷ್ಠಿ ಯಿಂದ ಅಲ್ಲಿ ಇರಿಸಲಾಗಿದೆ ಎಂದರು. ಆರೋಪಿ ಉದ್ದೇಶಪೂರ್ವಕವಾಗಿ ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಜೈಲು ಅಧೀಕ್ಷಕರು ಕೋರ್ಟ್ ಮುಂದೆ ತಿಳಿಸಿದರು.

ಬಳಿಕ ನ್ಯಾಯಾಧೀಶರು ಆರೋಪಿಗೆ ಆಹಾರ ಮತ್ತು ನೀರನ್ನು ತೆಗೆದು ಕೊಳ್ಳುವಂತೆ ನಿರ್ದೇಶನ ನೀಡಿದರು. ಆರೋಪಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು ಮತ್ತು ಅಗತ್ಯವಿದ್ದರೆ ಆತನಿಗೆ ವೈದ್ಯಕೀಯ ನೆರವು ನೀಡಬೇಕು ಎಂದು ನ್ಯಾಯಾಧೀಶರು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಇದ್ದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

15 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

15 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

15 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

16 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

20 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

20 hours ago