ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ನೀಡಿದೆ.
ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿ ಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆ ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ ಗುರುರಾಜ್ ಜಿ.ಎಸ್. ಹಾಜರಿದ್ದರು.
ಈ ಸಂದರ್ಭ ಆರೋಪಿಯು ‘ನನ್ನನ್ನು ಕ್ವಾರಂಟೈನ್ ಜೈಲಿನಲ್ಲಿ ಇರಿಸಲಾಗಿದೆ ಮತ್ತು ನಾನು ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ’ ಎಂದು ನ್ಯಾಯಾಧೀಶರ ಮುಂದೆ ಹೇಳಿದನು. ಆದುದರಿಂದ ನನ್ನನ್ನು ಮುಖ್ಯ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಆತ ನ್ಯಾಯಾಧೀಶರಲ್ಲಿ ಮನವಿ ಮಾಡಿದನು.
ಆರೋಪಿ ಅಹವಾಲು ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಜೈಲು ಅಧೀಕ್ಷಕರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರಾಗುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಸೂಚಿಸಿದರು. ಅದರಂತೆ ಹಾಜರಾದ ಜೈಲು ಅಧೀಕ್ಷರರು, ಮುಖ್ಯ ಜೈಲಿನಲ್ಲಿ ಆರೋಪಿಗೆ ಬೆದರಿಕೆ ಇರುವುದರಿಂದ ಸುರಕ್ಷತೆ ದೃಷ್ಠಿ ಯಿಂದ ಅಲ್ಲಿ ಇರಿಸಲಾಗಿದೆ ಎಂದರು. ಆರೋಪಿ ಉದ್ದೇಶಪೂರ್ವಕವಾಗಿ ಆಹಾರ ಮತ್ತು ನೀರನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಜೈಲು ಅಧೀಕ್ಷಕರು ಕೋರ್ಟ್ ಮುಂದೆ ತಿಳಿಸಿದರು.
ಬಳಿಕ ನ್ಯಾಯಾಧೀಶರು ಆರೋಪಿಗೆ ಆಹಾರ ಮತ್ತು ನೀರನ್ನು ತೆಗೆದು ಕೊಳ್ಳುವಂತೆ ನಿರ್ದೇಶನ ನೀಡಿದರು. ಆರೋಪಿಯ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕು ಮತ್ತು ಅಗತ್ಯವಿದ್ದರೆ ಆತನಿಗೆ ವೈದ್ಯಕೀಯ ನೆರವು ನೀಡಬೇಕು ಎಂದು ನ್ಯಾಯಾಧೀಶರು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಇದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…